ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಗರದ ಖಾಸಗಿ ಬಸ್ ನಿಲ್ದಾಣದಿಂದ ಹಳೆ ಆರ್.ಟಿ.ಓ ವೃತ್ತಕ್ಕೆ ತೆರಳುವ ಮಾರ್ಗದಲ್ಲಿ ಕೊಳದ ಸಮೀಪ ಯುಜಿಡಿ ಕಾಮಗಾರಿ ನಡೆಸಲಾಗಿತ್ತು, ಹತ್ತಿರದಲ್ಲಿ ಪುರಾತನವಾದ ದೊಡ್ಡರಸಿನ ಕೊಳವಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತಮ ಕಾಮಗಾರಿಯನ್ನು ನಡೆಸದೇ ನಿರ್ಲಕ್ಷ್ಯ ವಹಿಸಿದ ಪರಿಣಾಮ ಕೊಳದ ಕಟ್ಟೆ ಹೊಡೆದು ರಸ್ತೆ ಕುಸಿಯುವ ಹಂತಕ್ಕೆ ತಲುಪಿದೆ. ಸದ್ಯಕ್ಕೆ ಕೊಳದ ನೀರು ಖಾಸಗಿ ಬಸ್ ನಿಲ್ದಾಣಕ್ಕೆ ಹರಿದು ಹೋಗುತ್ತಿದ್ದು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಹಾಗೂ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ ಆ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…