ಜಿಲ್ಲೆಗಳು

ಚಾ. ನಗರ : ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

* ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ
* ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ
ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು, ಭೂ ವಿಜ್ಞಾನಿಗಳು ಹಾಗೂ ಇಂಜಿನಿಯರ್‌ಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಂ. ನಂಜುಂಡಸ್ವಾಮಿ, ಭೂ ವಿಜ್ಞಾನಿಗಳಾದ ಅನುಷಾ, ಯಶಸ್ವಿನಿ, ಇಂಜಿನಿಯರ್‌ಗಳಾದ ಭವಾನಿ ಮತ್ತು ರೀಟಾ ಅವರು ಚಂದಕವಾಡಿ, ಬಸಪ್ಪನಪಾಳ್ಯ, ದಡದಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಶಬ್ದ ಕೇಳಿಬಂದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.
ಚಂದಕವಾಡಿ ಮತ್ತು ದಡದಹಳ್ಳಿಗಳಲ್ಲಿ ಹೆಚ್ಚಿನ ಶಬ್ದ ಕೇಳಿಬಂದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬಸಪ್ಪನಪಾಳ್ಯದಲ್ಲಿ ಭಾರಿ ಸದ್ದು ಕೇಳಿ ಪಾತ್ರೆಗಳು ಅಲುಗಾಡಿದೆ ಎಂದು ಸ್ಥಳೀಯರು ಹೇಳಿದ್ದಾಗಿ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರಿಕ್ಟರ್ ಮಾಪಕ ಅಳವಡಿಲ್ಲ. ಕೆ.ಆರ್.ಎಸ್. ಜಲಾಶಯದ ಬಳಿ ಈ ಮಾಪಕವಿದೆ. ಅಲ್ಲಿನ ತಜ್ಞರಾದ ಅಭಿನಯ್ ಅವರನ್ನು ಈ ಬಗ್ಗೆ ವಿಚಾರಿಸಲಾಯಿತು. ಅಲ್ಲದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ತಜ್ಞರನ್ನು ವಿಚಾರಿಸಿದಾಗ ರಿಕ್ಟರ್ ಮಾಪನದಲ್ಲಿ ಭೂಕಂಪನ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ನಿರ್ದೇಶಕರು ಹೇಳಿದರು.
ಕಳೆದ 10-12  ವರ್ಷಗಳಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿರಲಿಲ್ಲ. ಕಳೆದ 15 ದಿನಗಳ ಹಿಂದೆ ಧಾರಾಕಾರ ಮಳೆಯಾಗಿ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿವೆ. ಭೂಮಿಯ ಶಿಲಾಪದರಗಳ ಕಂದಕಗಳಲ್ಲಿ ನೀರು  ಚಲನೆಯಾಗಿ ಹೈಡ್ರಾಲಿಕ್ ಪ್ರೆಸರ್ ಅಥವಾ ಹೈಡ್ರೊ ಡೈನಾಮಿಕ್ ಪ್ರೆಸರ್ ಸೃಷ್ಟಿಯಾಗಿ ಭಾರಿ ಸದ್ದು ಕೇಳಿಬರುತ್ತದೆ. ಅಂತಹ ಶಬ್ದ ಇದಾಗಿರಬಹುದು ಎಂದು ಊಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಭಾಗವನ್ನು ದಕ್ಷಿಣ ಶಿಯರ್ ವಲಯ, ಬಿಆರ್‌ಟಿ ಮತ್ತು ಕೊಳ್ಳೇಗಾಲ ಭಾಗವನ್ನು ಪೂರ್ವ ಶಿಯರ್ ವಲಯವೆಂದು ಕರೆಯಲಾಗುವುದು. ಈ ಶಿಯರ್ ವಲಯಗಳಲ್ಲಿ ಭೂ ಖಂಡಗಳ ಚಲನೆ ಆಗುವಾಗ ಘರ್ಷಣೆಯಾಗಿ ಒತ್ತಡವು ಅಲೆ ರೂಪದಲ್ಲಿ ಭೂಮಿಯೊಳಗೆ ಸಾಗಿದರೆ ಭರ್ಜರಿ ಶಬ್ದ ಕೇಳಿಬರಲಿದೆ. ಅಲ್ಲದೆ ಸೂಪರ್ ಸಾನಿಕ್ ಮತ್ತು ಪೈಟರ್ ಜೆಟ್ ವಿಮಾನಗಳು ಸಂಚರಿಸಿದಾಗಲೂ ಇಂತಹ ಶಬ್ದ ಕೇಳಿಸುತ್ತದೆ. ಇದು ಸಹ ಆಗಿರಬಹುದೆಂಬ ಊಹಿಸಲಾಗಿದೆ. ಭೂಕಂಪನ ಆಗಿರುವ ಬಗ್ಗೆ ಅಧಿಕೃತತೆ ಇಲ್ಲ. ಆದ್ದರಿಂದ ಚಂದಕವಾಡಿ ವ್ಯಾಪ್ತಿಯ ಮತ್ತು ಜಿಲ್ಲೆಯ ಜನರು ಆತಂಕಪಡಬೇಕಾಗಿಲ್ಲ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

andolanait

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

51 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

1 hour ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

2 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago