ಜಿಲ್ಲೆಗಳು

ಚಾ. ನಗರ : ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

* ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ
* ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ
ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು, ಭೂ ವಿಜ್ಞಾನಿಗಳು ಹಾಗೂ ಇಂಜಿನಿಯರ್‌ಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಂ. ನಂಜುಂಡಸ್ವಾಮಿ, ಭೂ ವಿಜ್ಞಾನಿಗಳಾದ ಅನುಷಾ, ಯಶಸ್ವಿನಿ, ಇಂಜಿನಿಯರ್‌ಗಳಾದ ಭವಾನಿ ಮತ್ತು ರೀಟಾ ಅವರು ಚಂದಕವಾಡಿ, ಬಸಪ್ಪನಪಾಳ್ಯ, ದಡದಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಶಬ್ದ ಕೇಳಿಬಂದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.
ಚಂದಕವಾಡಿ ಮತ್ತು ದಡದಹಳ್ಳಿಗಳಲ್ಲಿ ಹೆಚ್ಚಿನ ಶಬ್ದ ಕೇಳಿಬಂದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬಸಪ್ಪನಪಾಳ್ಯದಲ್ಲಿ ಭಾರಿ ಸದ್ದು ಕೇಳಿ ಪಾತ್ರೆಗಳು ಅಲುಗಾಡಿದೆ ಎಂದು ಸ್ಥಳೀಯರು ಹೇಳಿದ್ದಾಗಿ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರಿಕ್ಟರ್ ಮಾಪಕ ಅಳವಡಿಲ್ಲ. ಕೆ.ಆರ್.ಎಸ್. ಜಲಾಶಯದ ಬಳಿ ಈ ಮಾಪಕವಿದೆ. ಅಲ್ಲಿನ ತಜ್ಞರಾದ ಅಭಿನಯ್ ಅವರನ್ನು ಈ ಬಗ್ಗೆ ವಿಚಾರಿಸಲಾಯಿತು. ಅಲ್ಲದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ತಜ್ಞರನ್ನು ವಿಚಾರಿಸಿದಾಗ ರಿಕ್ಟರ್ ಮಾಪನದಲ್ಲಿ ಭೂಕಂಪನ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ನಿರ್ದೇಶಕರು ಹೇಳಿದರು.
ಕಳೆದ 10-12  ವರ್ಷಗಳಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿರಲಿಲ್ಲ. ಕಳೆದ 15 ದಿನಗಳ ಹಿಂದೆ ಧಾರಾಕಾರ ಮಳೆಯಾಗಿ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿವೆ. ಭೂಮಿಯ ಶಿಲಾಪದರಗಳ ಕಂದಕಗಳಲ್ಲಿ ನೀರು  ಚಲನೆಯಾಗಿ ಹೈಡ್ರಾಲಿಕ್ ಪ್ರೆಸರ್ ಅಥವಾ ಹೈಡ್ರೊ ಡೈನಾಮಿಕ್ ಪ್ರೆಸರ್ ಸೃಷ್ಟಿಯಾಗಿ ಭಾರಿ ಸದ್ದು ಕೇಳಿಬರುತ್ತದೆ. ಅಂತಹ ಶಬ್ದ ಇದಾಗಿರಬಹುದು ಎಂದು ಊಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಭಾಗವನ್ನು ದಕ್ಷಿಣ ಶಿಯರ್ ವಲಯ, ಬಿಆರ್‌ಟಿ ಮತ್ತು ಕೊಳ್ಳೇಗಾಲ ಭಾಗವನ್ನು ಪೂರ್ವ ಶಿಯರ್ ವಲಯವೆಂದು ಕರೆಯಲಾಗುವುದು. ಈ ಶಿಯರ್ ವಲಯಗಳಲ್ಲಿ ಭೂ ಖಂಡಗಳ ಚಲನೆ ಆಗುವಾಗ ಘರ್ಷಣೆಯಾಗಿ ಒತ್ತಡವು ಅಲೆ ರೂಪದಲ್ಲಿ ಭೂಮಿಯೊಳಗೆ ಸಾಗಿದರೆ ಭರ್ಜರಿ ಶಬ್ದ ಕೇಳಿಬರಲಿದೆ. ಅಲ್ಲದೆ ಸೂಪರ್ ಸಾನಿಕ್ ಮತ್ತು ಪೈಟರ್ ಜೆಟ್ ವಿಮಾನಗಳು ಸಂಚರಿಸಿದಾಗಲೂ ಇಂತಹ ಶಬ್ದ ಕೇಳಿಸುತ್ತದೆ. ಇದು ಸಹ ಆಗಿರಬಹುದೆಂಬ ಊಹಿಸಲಾಗಿದೆ. ಭೂಕಂಪನ ಆಗಿರುವ ಬಗ್ಗೆ ಅಧಿಕೃತತೆ ಇಲ್ಲ. ಆದ್ದರಿಂದ ಚಂದಕವಾಡಿ ವ್ಯಾಪ್ತಿಯ ಮತ್ತು ಜಿಲ್ಲೆಯ ಜನರು ಆತಂಕಪಡಬೇಕಾಗಿಲ್ಲ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago