ಜಿಲ್ಲೆಗಳು

ಚಾ. ನಗರ : ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ

* ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ
* ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ
ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು, ಭೂ ವಿಜ್ಞಾನಿಗಳು ಹಾಗೂ ಇಂಜಿನಿಯರ್‌ಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಂ. ನಂಜುಂಡಸ್ವಾಮಿ, ಭೂ ವಿಜ್ಞಾನಿಗಳಾದ ಅನುಷಾ, ಯಶಸ್ವಿನಿ, ಇಂಜಿನಿಯರ್‌ಗಳಾದ ಭವಾನಿ ಮತ್ತು ರೀಟಾ ಅವರು ಚಂದಕವಾಡಿ, ಬಸಪ್ಪನಪಾಳ್ಯ, ದಡದಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಶಬ್ದ ಕೇಳಿಬಂದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.
ಚಂದಕವಾಡಿ ಮತ್ತು ದಡದಹಳ್ಳಿಗಳಲ್ಲಿ ಹೆಚ್ಚಿನ ಶಬ್ದ ಕೇಳಿಬಂದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬಸಪ್ಪನಪಾಳ್ಯದಲ್ಲಿ ಭಾರಿ ಸದ್ದು ಕೇಳಿ ಪಾತ್ರೆಗಳು ಅಲುಗಾಡಿದೆ ಎಂದು ಸ್ಥಳೀಯರು ಹೇಳಿದ್ದಾಗಿ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರಿಕ್ಟರ್ ಮಾಪಕ ಅಳವಡಿಲ್ಲ. ಕೆ.ಆರ್.ಎಸ್. ಜಲಾಶಯದ ಬಳಿ ಈ ಮಾಪಕವಿದೆ. ಅಲ್ಲಿನ ತಜ್ಞರಾದ ಅಭಿನಯ್ ಅವರನ್ನು ಈ ಬಗ್ಗೆ ವಿಚಾರಿಸಲಾಯಿತು. ಅಲ್ಲದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ತಜ್ಞರನ್ನು ವಿಚಾರಿಸಿದಾಗ ರಿಕ್ಟರ್ ಮಾಪನದಲ್ಲಿ ಭೂಕಂಪನ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ನಿರ್ದೇಶಕರು ಹೇಳಿದರು.
ಕಳೆದ 10-12  ವರ್ಷಗಳಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿರಲಿಲ್ಲ. ಕಳೆದ 15 ದಿನಗಳ ಹಿಂದೆ ಧಾರಾಕಾರ ಮಳೆಯಾಗಿ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿವೆ. ಭೂಮಿಯ ಶಿಲಾಪದರಗಳ ಕಂದಕಗಳಲ್ಲಿ ನೀರು  ಚಲನೆಯಾಗಿ ಹೈಡ್ರಾಲಿಕ್ ಪ್ರೆಸರ್ ಅಥವಾ ಹೈಡ್ರೊ ಡೈನಾಮಿಕ್ ಪ್ರೆಸರ್ ಸೃಷ್ಟಿಯಾಗಿ ಭಾರಿ ಸದ್ದು ಕೇಳಿಬರುತ್ತದೆ. ಅಂತಹ ಶಬ್ದ ಇದಾಗಿರಬಹುದು ಎಂದು ಊಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಭಾಗವನ್ನು ದಕ್ಷಿಣ ಶಿಯರ್ ವಲಯ, ಬಿಆರ್‌ಟಿ ಮತ್ತು ಕೊಳ್ಳೇಗಾಲ ಭಾಗವನ್ನು ಪೂರ್ವ ಶಿಯರ್ ವಲಯವೆಂದು ಕರೆಯಲಾಗುವುದು. ಈ ಶಿಯರ್ ವಲಯಗಳಲ್ಲಿ ಭೂ ಖಂಡಗಳ ಚಲನೆ ಆಗುವಾಗ ಘರ್ಷಣೆಯಾಗಿ ಒತ್ತಡವು ಅಲೆ ರೂಪದಲ್ಲಿ ಭೂಮಿಯೊಳಗೆ ಸಾಗಿದರೆ ಭರ್ಜರಿ ಶಬ್ದ ಕೇಳಿಬರಲಿದೆ. ಅಲ್ಲದೆ ಸೂಪರ್ ಸಾನಿಕ್ ಮತ್ತು ಪೈಟರ್ ಜೆಟ್ ವಿಮಾನಗಳು ಸಂಚರಿಸಿದಾಗಲೂ ಇಂತಹ ಶಬ್ದ ಕೇಳಿಸುತ್ತದೆ. ಇದು ಸಹ ಆಗಿರಬಹುದೆಂಬ ಊಹಿಸಲಾಗಿದೆ. ಭೂಕಂಪನ ಆಗಿರುವ ಬಗ್ಗೆ ಅಧಿಕೃತತೆ ಇಲ್ಲ. ಆದ್ದರಿಂದ ಚಂದಕವಾಡಿ ವ್ಯಾಪ್ತಿಯ ಮತ್ತು ಜಿಲ್ಲೆಯ ಜನರು ಆತಂಕಪಡಬೇಕಾಗಿಲ್ಲ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

andolanait

Recent Posts

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

7 mins ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

19 mins ago

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

54 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

1 hour ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

1 hour ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago