ಜಿಲ್ಲೆಗಳು

ಶಾಸಕರಿಂದ ಸಿಎಂ ಮೇಲೆ ಹೆಚ್ಚು ನಿರೀಕ್ಷೆ : ಡಿ.12ರ ಕಾರ್ಯಕ್ರಮ ಯಶಸ್ವಿಗೆ ಸೋಮಣ್ಣ ಮನವಿ

ಚಾಮರಾಜನಗರ: ಡಿ.೧೨ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೇಲೆ ನಾನು ಸೇರಿದಂತೆ ನಾಲ್ವರು ಶಾಸಕರು ದೊಡ್ಡ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ೯೫ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಉದ್ಘಾಟಿಸುವರು. ಅಲ್ಲದೆ ೨೯೧ ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡುವರು. ೩ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸುವರು ಎಂದರು.
ಜಿಲ್ಲೆಯ ೩೭೬ ಕೆರೆಗಳಿಗೆ ನೀರು ತುಂಬಿಸುವ ೧೫೦೦ ಕೋಟಿ ರೂ. ಯೋಜನೆಗೂ ಶಂಕುಸ್ಥಾಪನೆ ನೀಡಲಿದ್ದಾರೆ. ಇದಲ್ಲದೆ ಇನ್ನು ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ತಿಳಿಸಿದರು.
ಇವುಗಳಲ್ಲದೆ ಇನ್ನು ಕೆಲವು ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ನಾನು ಮತ್ತು ನಾಲ್ವರು ಶಾಸಕರು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮುಖ್ಯಮಂತ್ರಿ ಅವರು ಡಿ.೧೨ ರಂದು ಚಾಮರಾಜನಗರಕ್ಕೆ ಆಗಮಿಸಿ ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨.೩೦ ಗಂಟೆ ತನಕ ಕಾರ್ಯಕ್ರಮದಲ್ಲಿ ಹಾಜರಿರುವರು. ನಂತರ ಹನೂರು, ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ. ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆ ಹಿಂದುಳಿದಿದೆ ಎಂಬ ಶಾಪವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅಧಿಕಾರಿಗಳು ಸಹಕಾರ ನೀಡಬೇಕು. ಭಾನುವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದು ಕಾರ್ಯಕ್ರಮಕ್ಕೆ ಸಜ್ಜಾಗಬೇಕು. ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಕರೆತರಬೇಕು ಎಂದು ಸೂಚಿಸಿದರು.

andolanait

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

1 hour ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago