ಜಿಲ್ಲೆಗಳು

ಶಾಸಕರಿಂದ ಸಿಎಂ ಮೇಲೆ ಹೆಚ್ಚು ನಿರೀಕ್ಷೆ : ಡಿ.12ರ ಕಾರ್ಯಕ್ರಮ ಯಶಸ್ವಿಗೆ ಸೋಮಣ್ಣ ಮನವಿ

ಚಾಮರಾಜನಗರ: ಡಿ.೧೨ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೇಲೆ ನಾನು ಸೇರಿದಂತೆ ನಾಲ್ವರು ಶಾಸಕರು ದೊಡ್ಡ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ೯೫ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಉದ್ಘಾಟಿಸುವರು. ಅಲ್ಲದೆ ೨೯೧ ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡುವರು. ೩ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸುವರು ಎಂದರು.
ಜಿಲ್ಲೆಯ ೩೭೬ ಕೆರೆಗಳಿಗೆ ನೀರು ತುಂಬಿಸುವ ೧೫೦೦ ಕೋಟಿ ರೂ. ಯೋಜನೆಗೂ ಶಂಕುಸ್ಥಾಪನೆ ನೀಡಲಿದ್ದಾರೆ. ಇದಲ್ಲದೆ ಇನ್ನು ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ತಿಳಿಸಿದರು.
ಇವುಗಳಲ್ಲದೆ ಇನ್ನು ಕೆಲವು ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ನಾನು ಮತ್ತು ನಾಲ್ವರು ಶಾಸಕರು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮುಖ್ಯಮಂತ್ರಿ ಅವರು ಡಿ.೧೨ ರಂದು ಚಾಮರಾಜನಗರಕ್ಕೆ ಆಗಮಿಸಿ ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨.೩೦ ಗಂಟೆ ತನಕ ಕಾರ್ಯಕ್ರಮದಲ್ಲಿ ಹಾಜರಿರುವರು. ನಂತರ ಹನೂರು, ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ. ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆ ಹಿಂದುಳಿದಿದೆ ಎಂಬ ಶಾಪವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅಧಿಕಾರಿಗಳು ಸಹಕಾರ ನೀಡಬೇಕು. ಭಾನುವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದು ಕಾರ್ಯಕ್ರಮಕ್ಕೆ ಸಜ್ಜಾಗಬೇಕು. ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಕರೆತರಬೇಕು ಎಂದು ಸೂಚಿಸಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

1 hour ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

9 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

11 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

18 hours ago