ಜಿಲ್ಲೆಗಳು

ಶಾಸಕರಿಂದ ಸಿಎಂ ಮೇಲೆ ಹೆಚ್ಚು ನಿರೀಕ್ಷೆ : ಡಿ.12ರ ಕಾರ್ಯಕ್ರಮ ಯಶಸ್ವಿಗೆ ಸೋಮಣ್ಣ ಮನವಿ

ಚಾಮರಾಜನಗರ: ಡಿ.೧೨ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೇಲೆ ನಾನು ಸೇರಿದಂತೆ ನಾಲ್ವರು ಶಾಸಕರು ದೊಡ್ಡ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ೯೫ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಉದ್ಘಾಟಿಸುವರು. ಅಲ್ಲದೆ ೨೯೧ ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡುವರು. ೩ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸುವರು ಎಂದರು.
ಜಿಲ್ಲೆಯ ೩೭೬ ಕೆರೆಗಳಿಗೆ ನೀರು ತುಂಬಿಸುವ ೧೫೦೦ ಕೋಟಿ ರೂ. ಯೋಜನೆಗೂ ಶಂಕುಸ್ಥಾಪನೆ ನೀಡಲಿದ್ದಾರೆ. ಇದಲ್ಲದೆ ಇನ್ನು ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ತಿಳಿಸಿದರು.
ಇವುಗಳಲ್ಲದೆ ಇನ್ನು ಕೆಲವು ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ನಾನು ಮತ್ತು ನಾಲ್ವರು ಶಾಸಕರು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮುಖ್ಯಮಂತ್ರಿ ಅವರು ಡಿ.೧೨ ರಂದು ಚಾಮರಾಜನಗರಕ್ಕೆ ಆಗಮಿಸಿ ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨.೩೦ ಗಂಟೆ ತನಕ ಕಾರ್ಯಕ್ರಮದಲ್ಲಿ ಹಾಜರಿರುವರು. ನಂತರ ಹನೂರು, ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ. ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆ ಹಿಂದುಳಿದಿದೆ ಎಂಬ ಶಾಪವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅಧಿಕಾರಿಗಳು ಸಹಕಾರ ನೀಡಬೇಕು. ಭಾನುವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದು ಕಾರ್ಯಕ್ರಮಕ್ಕೆ ಸಜ್ಜಾಗಬೇಕು. ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಕರೆತರಬೇಕು ಎಂದು ಸೂಚಿಸಿದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago