ಕೊಳ್ಳೇಗಾಲ: ಮಗನೊಬ್ಬ ಸುಳ್ಳು ಹೇಳಿ ತಾಯಿಯಿಂದ ಆಸ್ತಿ ಬರೆಸಿಕೊಂಡ ಮೊಕದ್ದಮೆ ಸಂಬoಧ ವಿಚಾರಣೆಗೆಂದು ತಾಯಿಯನ್ನು ಮಂಚದ ಸಮೇತ ಪಟ್ಟಣದ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದ ಘಟನೆ ನಡೆದಿದೆ.
ಚಾಮರಾಜನಗರದ ಗಾಳಿಪುರ ಬಡಾವಣೆಯ ಮಮ್ತಾಜ್ ಬೇಗಂ (೭೫) ತಮ್ಮ ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬoಧ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಅನಾರೋಗ್ಯದಿಂದಾಗಿ ಮಮ್ತಾಜ್ ಬೇಗಂ ಅವರು ಕಳೆದ ೨ ತಿಂಗಳಿನಿoದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಆದ್ದರಿಂದ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಲೇ ಬೇಕಾದ್ದರಿಂದ ತಮ್ಮ ಮಗಳಾದ ಸಿ.ಎನ್.ನೂರ್ ಆಯಿಷಾರ ಸಂಬoಧಿಕರ ನೆರವಿನಿಂದ ಮಂಚದ ಮೇಲೆ ಮಲಗಿಸಿಯೇ ಕರೆತರಲಾಗಿತ್ತು.
ಪತಿ ನಿಸಾರ್ ಅಹಮ್ಮದ್ ಪತ್ನಿಯಾದ ಮಮ್ತಾಜ್ ಹೆಸರಿಗೆ ೩.೨೮ ಎಕರೆ ಜಮೀನು ಬರೆದಿದ್ದರು. ಈ ದಂಪತಿಗೆ ೬ ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ ಹಜ್ ಯಾತ್ರೆಗೆ ತೆರಳಲು ಪಾಸ್ಪೋರ್ಟ್ ಮಾಡಿಸಿಕೊಡುವುದಾಗಿ ತಾಯಿಯನ್ನು ನಂಬಿಸಿ ಸಹಿ ಹಾಕಿಸಿಕೊಂಡು ಆಕೆಯ ಜಮೀನನ್ನು ತನ್ನ ಹೆಸರಿಗೆ ಬರೆಯಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.
ಮಮ್ತಾಜ್ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಪೊಟೋವನ್ನು ನಮ್ಮ ಸಿಬ್ಬಂದಿ ನನಗೆ ತೋರಿಸಿದ್ದರು. ಇಂತಹ ಸ್ಥಿತಿಯಲ್ಲಿ ಕರೆತರುವುದು ಬೇಡ ಎಂದು ಹೇಳಿದ್ದೆ. ಆದರೂ ಅವರ ಮನೆಯವರು ಮಂಚದ ಸಮೇತ ಅವರನ್ನು ಕರೆ ತಂದಿದ್ದರು.
– ಗೀತಾ ಹುಡೇದ, ಉಪವಿಭಾಗಾಧಿಕಾರಿ, ಕೊಳ್ಳೇಗಾಲ
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…