ಕೊಳ್ಳೇಗಾಲ: ಮಗನೊಬ್ಬ ಸುಳ್ಳು ಹೇಳಿ ತಾಯಿಯಿಂದ ಆಸ್ತಿ ಬರೆಸಿಕೊಂಡ ಮೊಕದ್ದಮೆ ಸಂಬoಧ ವಿಚಾರಣೆಗೆಂದು ತಾಯಿಯನ್ನು ಮಂಚದ ಸಮೇತ ಪಟ್ಟಣದ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದ ಘಟನೆ ನಡೆದಿದೆ.
ಚಾಮರಾಜನಗರದ ಗಾಳಿಪುರ ಬಡಾವಣೆಯ ಮಮ್ತಾಜ್ ಬೇಗಂ (೭೫) ತಮ್ಮ ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬoಧ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಅನಾರೋಗ್ಯದಿಂದಾಗಿ ಮಮ್ತಾಜ್ ಬೇಗಂ ಅವರು ಕಳೆದ ೨ ತಿಂಗಳಿನಿoದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಆದ್ದರಿಂದ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಲೇ ಬೇಕಾದ್ದರಿಂದ ತಮ್ಮ ಮಗಳಾದ ಸಿ.ಎನ್.ನೂರ್ ಆಯಿಷಾರ ಸಂಬoಧಿಕರ ನೆರವಿನಿಂದ ಮಂಚದ ಮೇಲೆ ಮಲಗಿಸಿಯೇ ಕರೆತರಲಾಗಿತ್ತು.
ಪತಿ ನಿಸಾರ್ ಅಹಮ್ಮದ್ ಪತ್ನಿಯಾದ ಮಮ್ತಾಜ್ ಹೆಸರಿಗೆ ೩.೨೮ ಎಕರೆ ಜಮೀನು ಬರೆದಿದ್ದರು. ಈ ದಂಪತಿಗೆ ೬ ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೊನೆಯ ಮಗ ಸಿ.ಎನ್.ಅಬ್ದುಲ್ ರಜಾಕ್ ಹಜ್ ಯಾತ್ರೆಗೆ ತೆರಳಲು ಪಾಸ್ಪೋರ್ಟ್ ಮಾಡಿಸಿಕೊಡುವುದಾಗಿ ತಾಯಿಯನ್ನು ನಂಬಿಸಿ ಸಹಿ ಹಾಕಿಸಿಕೊಂಡು ಆಕೆಯ ಜಮೀನನ್ನು ತನ್ನ ಹೆಸರಿಗೆ ಬರೆಯಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.
ಮಮ್ತಾಜ್ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಪೊಟೋವನ್ನು ನಮ್ಮ ಸಿಬ್ಬಂದಿ ನನಗೆ ತೋರಿಸಿದ್ದರು. ಇಂತಹ ಸ್ಥಿತಿಯಲ್ಲಿ ಕರೆತರುವುದು ಬೇಡ ಎಂದು ಹೇಳಿದ್ದೆ. ಆದರೂ ಅವರ ಮನೆಯವರು ಮಂಚದ ಸಮೇತ ಅವರನ್ನು ಕರೆ ತಂದಿದ್ದರು.
– ಗೀತಾ ಹುಡೇದ, ಉಪವಿಭಾಗಾಧಿಕಾರಿ, ಕೊಳ್ಳೇಗಾಲ
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…