ಜಿಲ್ಲೆಗಳು

ಚಾ.ನಗರ : 2 ವರ್ಷಗಳ ಬಳಿಕ ದಸರಾ ಆಚರಣೆಗೆ ಜಿಲ್ಲಾಡಳಿತ ಸಜ್ಜು

ಚಾಮರಾಜನಗರ : ಇದೇ ತಿಂಗಳ 27ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲಾ ದಸರಾಗೆ ಕ್ಷಣಗಣನೆ ಆರಂಭವಾಗಿದೆ.

ಎರಡು ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಣೆ ಮಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜುಗೊಂಡಿದೆ. ಕಲಾತಂಡಗಳ ಮೆರವಣಿಗೆ, ರೈತ ದಸರ, ಮಹಿಳಾ ದಸರ, ಕವಿಗೋಷ್ಠಿ, ಪಲಪುಷ್ಪ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾ ಸಂಭ್ರಮವನ್ನು ಹೆಚ್ಚಿಸಲಿದೆ.

ನಾಲ್ಕು ದಿನಗಳ ಕಾಲ ಪ್ರತಿ ದಿನ ಮಧ್ಯಾಹ್ನ 3:30 ರಿಂದ ರಾತ್ರಿ 10 ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಮೂರು ಕಡೆಗಳಲ್ಲಿ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಚಾಮರಾಜೇಶ್ವರ ಸ್ವಾಮಿ  ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುವ ಪ್ರಧಾನ ವೇದಿಕೆಯಲ್ಲಿ ಜೆಎಚ್ ಪಟೇಲ್ ಸಭಾಂಗಣದಲ್ಲಿ ಹಾಗೂ ಡಾ. ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಕಲಾವಿದರ ಗಾಯನ ಹಾಡು ನೃತ್ಯಗಳ ಜೊತೆಗೆ ಬೆಂಗಳೂರಿನಿಂದ ಬರುವ ವಿವಿಧ ಕಲಾವಿದರು ಪ್ರದರ್ಶನಗಳು ದಸರ ಸಂಭ್ರಮವನ್ನು ಕಳೆಕಟ್ಟಲಿವೆ.

 

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

22 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago