ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ ದಿವಸದಲ್ಲಿ ತುರ್ತು ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಮೂಲಸೌಕರ್ಯ ಸರಿಯಾಗಿ ಕಲ್ಪಿಸಬೇಕು, ಒಳ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇರುವ ಸಖಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು.





