Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಚಾ.ನಗರ: ಜಿಲ್ಲಾಡಳಿತದ ವಿರುದ್ಧ ಬೇಸತ್ತು ರಸ್ತೆ ಗುಂಡಿ ಮುಚ್ಚಿದ ಯುವಕರು

ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ.

ಚಾಮರಾಜನಗರ ಯುವಕರು

ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹರದನಹಳ್ಳಿ, ವೆಂಕಟಯ್ಯಛತ್ರ, ಸಿದ್ದಯ್ಯನಪುರ ಹಾಗೂ ಇತರೆ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಸಾರ್ವಜನಿಕರು ಈ ಕುರಿತು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸತ್ತ ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ಯುವಕರೇ ಮುಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮಚವಾಡಿ ಗ್ರಾಮದ ಶಿವಶಂಕರ್ ಚಟ್ಟು ಅವರು ನಮ್ಮನ್ನು ಆಳುವ ಸರ್ಕಾರಗಳು ಮಾಡದ ಕೆಲಸಗಳನ್ನು ಸಾರ್ವಜನಿಕರೇ ಮಾಡಿದರೇ ಸರ್ಕಾರಕ್ಕೆ ಅವಮಾನವಾಗಲಿ ಈ ರೂಪದಲ್ಲಾದರೂ ಸರ್ಕಾರ ಜನರ ಸಂಕಷ್ಟಗಳನ್ನು ಅರಿಯಲಿ ಎಂಬ ಉದ್ದೇಶದಿಂದ ಈ ಭಾಗದ ಕೆಲವು ಗ್ರಾಮಗಳ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ತಿಳಿಸಿದರು.

 

ಉಪನ್ಯಾಸಕರಾದ ಶ್ರೀಧರ್.ಎಸ್, ಅರಣ್ಯ ಇಲಾಖೆಯ ಮಸಾಕ್ ಸಾಬ್ (ಗುಲ್ಬರ್ಗ), ಮಾದು ಸಿದ್ದಯ್ಯನಪುರ, ವೀರೇಶ್ ಹೊಸೂರ್ ಹಾಗೂ ಮತ್ತಷ್ಟು ಯುವಕರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!