ಜಿಲ್ಲೆಗಳು

ಚಾ.ನಗರ: ಜಿಲ್ಲಾಡಳಿತದ ವಿರುದ್ಧ ಬೇಸತ್ತು ರಸ್ತೆ ಗುಂಡಿ ಮುಚ್ಚಿದ ಯುವಕರು

ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ.

ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹರದನಹಳ್ಳಿ, ವೆಂಕಟಯ್ಯಛತ್ರ, ಸಿದ್ದಯ್ಯನಪುರ ಹಾಗೂ ಇತರೆ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಸಾರ್ವಜನಿಕರು ಈ ಕುರಿತು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸತ್ತ ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ಯುವಕರೇ ಮುಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮಚವಾಡಿ ಗ್ರಾಮದ ಶಿವಶಂಕರ್ ಚಟ್ಟು ಅವರು ನಮ್ಮನ್ನು ಆಳುವ ಸರ್ಕಾರಗಳು ಮಾಡದ ಕೆಲಸಗಳನ್ನು ಸಾರ್ವಜನಿಕರೇ ಮಾಡಿದರೇ ಸರ್ಕಾರಕ್ಕೆ ಅವಮಾನವಾಗಲಿ ಈ ರೂಪದಲ್ಲಾದರೂ ಸರ್ಕಾರ ಜನರ ಸಂಕಷ್ಟಗಳನ್ನು ಅರಿಯಲಿ ಎಂಬ ಉದ್ದೇಶದಿಂದ ಈ ಭಾಗದ ಕೆಲವು ಗ್ರಾಮಗಳ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ತಿಳಿಸಿದರು.

 

ಉಪನ್ಯಾಸಕರಾದ ಶ್ರೀಧರ್.ಎಸ್, ಅರಣ್ಯ ಇಲಾಖೆಯ ಮಸಾಕ್ ಸಾಬ್ (ಗುಲ್ಬರ್ಗ), ಮಾದು ಸಿದ್ದಯ್ಯನಪುರ, ವೀರೇಶ್ ಹೊಸೂರ್ ಹಾಗೂ ಮತ್ತಷ್ಟು ಯುವಕರು ಭಾಗವಹಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago