ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ.
ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹರದನಹಳ್ಳಿ, ವೆಂಕಟಯ್ಯಛತ್ರ, ಸಿದ್ದಯ್ಯನಪುರ ಹಾಗೂ ಇತರೆ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಸಾರ್ವಜನಿಕರು ಈ ಕುರಿತು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸತ್ತ ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ಯುವಕರೇ ಮುಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಮಚವಾಡಿ ಗ್ರಾಮದ ಶಿವಶಂಕರ್ ಚಟ್ಟು ಅವರು ನಮ್ಮನ್ನು ಆಳುವ ಸರ್ಕಾರಗಳು ಮಾಡದ ಕೆಲಸಗಳನ್ನು ಸಾರ್ವಜನಿಕರೇ ಮಾಡಿದರೇ ಸರ್ಕಾರಕ್ಕೆ ಅವಮಾನವಾಗಲಿ ಈ ರೂಪದಲ್ಲಾದರೂ ಸರ್ಕಾರ ಜನರ ಸಂಕಷ್ಟಗಳನ್ನು ಅರಿಯಲಿ ಎಂಬ ಉದ್ದೇಶದಿಂದ ಈ ಭಾಗದ ಕೆಲವು ಗ್ರಾಮಗಳ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ತಿಳಿಸಿದರು.
ಉಪನ್ಯಾಸಕರಾದ ಶ್ರೀಧರ್.ಎಸ್, ಅರಣ್ಯ ಇಲಾಖೆಯ ಮಸಾಕ್ ಸಾಬ್ (ಗುಲ್ಬರ್ಗ), ಮಾದು ಸಿದ್ದಯ್ಯನಪುರ, ವೀರೇಶ್ ಹೊಸೂರ್ ಹಾಗೂ ಮತ್ತಷ್ಟು ಯುವಕರು ಭಾಗವಹಿಸಿದ್ದರು.
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…