ಜಿಲ್ಲೆಗಳು

ಚಾ.ನಗರ: ಜಿಲ್ಲಾಡಳಿತದ ವಿರುದ್ಧ ಬೇಸತ್ತು ರಸ್ತೆ ಗುಂಡಿ ಮುಚ್ಚಿದ ಯುವಕರು

ಚಾಮರಾಜನಗರ: ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡಿಮಟ್ಟ ಗುಂಡಿ ಬಿದ್ದಿದ್ದು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳ ಬೇಜವಬ್ದಾರಿಗೆ ಬೇಸತ್ತು ಸಾರ್ವಜನಿಕರೇ ಗುಂಡಿ ಮುಚ್ಚಿರುವ ಘಟನೆ ನಡೆದಿದೆ.

ನಗರದ ಸೋಮವಾರಪೇಟೆ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹರದನಹಳ್ಳಿ, ವೆಂಕಟಯ್ಯಛತ್ರ, ಸಿದ್ದಯ್ಯನಪುರ ಹಾಗೂ ಇತರೆ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಸಾರ್ವಜನಿಕರು ಈ ಕುರಿತು ಜಿಲ್ಲಾಡಳಿತ ಹಾಗೂ ರಾಜಕಾರಣಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ ಇದರಿಂದ ಬೇಸತ್ತ ಈ ರಸ್ತೆಯಲ್ಲಿ ನಿತ್ಯ ಸಂಚರಿಸುವ ಯುವಕರೇ ಮುಂದಾಗಿ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅಮಚವಾಡಿ ಗ್ರಾಮದ ಶಿವಶಂಕರ್ ಚಟ್ಟು ಅವರು ನಮ್ಮನ್ನು ಆಳುವ ಸರ್ಕಾರಗಳು ಮಾಡದ ಕೆಲಸಗಳನ್ನು ಸಾರ್ವಜನಿಕರೇ ಮಾಡಿದರೇ ಸರ್ಕಾರಕ್ಕೆ ಅವಮಾನವಾಗಲಿ ಈ ರೂಪದಲ್ಲಾದರೂ ಸರ್ಕಾರ ಜನರ ಸಂಕಷ್ಟಗಳನ್ನು ಅರಿಯಲಿ ಎಂಬ ಉದ್ದೇಶದಿಂದ ಈ ಭಾಗದ ಕೆಲವು ಗ್ರಾಮಗಳ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ತಿಳಿಸಿದರು.

 

ಉಪನ್ಯಾಸಕರಾದ ಶ್ರೀಧರ್.ಎಸ್, ಅರಣ್ಯ ಇಲಾಖೆಯ ಮಸಾಕ್ ಸಾಬ್ (ಗುಲ್ಬರ್ಗ), ಮಾದು ಸಿದ್ದಯ್ಯನಪುರ, ವೀರೇಶ್ ಹೊಸೂರ್ ಹಾಗೂ ಮತ್ತಷ್ಟು ಯುವಕರು ಭಾಗವಹಿಸಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago