ಜಿಲ್ಲೆಗಳು

ಚಾ.ನಗರ ಜಿಲ್ಲೆ: ನಿರೀಕ್ಷಿಸಿದ ಮುಖಗಳೇ ‘ಕೈ’ ಆಕಾಂಕ್ಷಿಗಳು

ಅರ್ಜಿ ಹಾಕಲು ಕಾಲಾವಕಾಶವಿದ್ದು ಇನ್ಯಾರಾದರೂ ಸಲ್ಲಿಸಬಹುದೇ ?

ಚಾಮರಾಜನಗರ: ಸಾರ್ವತ್ರಿಕ ಚುನಾವಣೆಗೆ ಇನ್ನೂ 6ತಿಂಗಳಿರುವಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸುತ್ತಿದ್ದು ಇದುವರೆಗೆ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಿಂದ ಅರ್ಜಿ ಸಲ್ಲಿಸಿರುವವರಲ್ಲಿ ಬಹುತೇಕ ನಿರೀಕ್ಷಿಸಿದ್ದ ಅಭ್ಯರ್ಥಿಗಳೇ ಇದ್ದಾರೆ!
ಚಾಮರಾಜನಗರ, ಹನೂರು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಂದ ತಲಾ ಒಬ್ಬರು ಮತ್ತು ಕೊಳ್ಳೇಗಾಲ(ಮೀಸಲು) ಕ್ಷೇತ್ರದಿಂದ ಮೂವರು ಅರ್ಜಿ ಸಲ್ಲಿಸಿದ್ದು ಇದು ನ.15ರವರೆಗಿನ ಮಾಹಿತಿಯಾಗಿದೆ.
ವಾಸ್ತವವಾಗಿ, ನ.5ರಿಂದ 15ರವರೆಗಷ್ಟೇ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಬಳಿಕ ನ.21ರವರೆಗೂ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ್ದು ಈ ನಾಲ್ಕು ಕ್ಷೇತ್ರಗಳಿಂದ ಇನ್ಯಾರಾದರೂ ಈ ಅವಧಿಯಲ್ಲಿ ಅರ್ಜಿ ಹಾಕಬಹುದೇ ಎಂಬುದನ್ನು ಕಾದು ನೋಡಬೇಕಿದೆ.
ಚಾ.ನಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದು ಇವರು ಈ ಕ್ಷೇತ್ರವನ್ನು ಸತತವಾಗಿ 3ಬಾರಿ ಪ್ರತಿನಿಧಿಸಿದ್ದಾರೆ. ಕಾಂಗ್ರೆಸ್ –ಜಾ.ದಳ ಸಮ್ಮಿಶ್ರಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾಗಿ ಇಲ್ಲಿಯ ಉಸ್ತುವಾರಿ ಮಂತ್ರಿಯಾಗಿ ಕಾರ್ಯನಿರ್ವಹಿಸಿರುವುದಲ್ಲದೇ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ಅಧ್ಯಕ್ಷರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.
ಇನ್ನು ಹನೂರು ವಿಧಾನಸಭಾ ಕ್ಷೇತ್ರದಿಂದ ಶಾಸಕ ಆರ್.ನರೇಂದ್ರ ಅವರು ಬಿ.ಫಾರಂ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಸತತವಾಗಿ ಅವರು 3ನೇ ಬಾರಿ ಶಾಸಕರು. ನರೇಂದ್ರ ಅವರ ತಂದೆ ಮಾಜಿ ಸಚಿವ ದಿವಂಗತ ಜಿ.ರಾಜೂಗೌಡ ಅವರೂ ಕಾಂಗ್ರೆಸ್ ನಿಷ್ಠಾವಂತರಾಗಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ನರೇಂದ್ರ ಕಾರ್ಯನಿರ್ವಹಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೋರಿ ಯುವ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ವಿಧಾನಸಭಾ ಟಿಕೆಟ್ ಬಯಸಿರುವ ಅವರಿಗೆ ತಂದೆ-ತಾಯಿಯ ರಾಜಕೀಯ ಪ್ರಭಾವವೇ ಶಕ್ತಿಯಾಗಿದೆ. ಮಾಜಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರು 2ದಶಕಗಳಿಗೂ ಹೆಚ್ಚುಕಾಲ ಈ ಕ್ಷೇತ್ರ ಪ್ರತಿನಿಧಿಸಿ ವಿವಿಧ ನಾಯಕರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ, ಉಸ್ತುವಾರಿ ಮಂತ್ರಿಯಾಗಿದ್ದರು. ಅವರ ನಿಧನ ನಂತರ ಡಾ.ಗೀತಾಮಹದೇವಪ್ರಸಾದ್ ಶಾಸಕರಾಗಿ, ಸಚಿವರಾಗಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ.
ಕೊಳ್ಳೇಗಾಲ (ಮೀಸಲು) ವಿಧಾನಸಭಾ ಕ್ಷೇತ್ರದಿಂದ ಸಹಜವಾಗಿಯೇ ಮಾಜಿ ಶಾಸಕರಾದ ಎಸ್.ಜಯಣ್ಣ, ಎ.ಆರ್.ಕೃಷ್ಣಮೂರ್ತಿ, ಎಸ್.ಬಾಲರಾಜು ಅವರು ಟಿಕೆಟ್ ಕೋರಿ ಅರ್ಜಿ ಹಾಕಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಎಸ್.ಜಯಣ್ಣ ಸಿದ್ದರಾಮಯ್ಯ ಅವರಿಗೆ ಅತ್ಯಾಪ್ತರು.
ಆದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರ ಸಹಕಾರವೂ ಇತ್ತು. 2ಬಾರಿ ಶಾಸಕರಾಗಿದ್ದ  ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಪುತ್ರ ಎಂಬ ಹಿನ್ನೆಲೆಯೂ ಪ್ರಮುಖವಾಗಿ ಕೆಲಸ ಮಾಡಿತ್ತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಎಸ್.ಬಾಲರಾಜು ದಶಕಗಳ ಹಿಂದೆಯೇ ಪಕ್ಷೇತರವಾಗಿ ಗೆದ್ದು ಶಾಸಕರಾಗಿದ್ದವರು. ಪ್ರಮುಖ ನಾಯಕರ ಜೊತೆ ಅದರಲ್ಲೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣರ ಜೊತೆ ಬಾಲರಾಜ್ ನಿಕಟ ಸಂಪರ್ಕ ಹೊಂದಿದ್ದಾರೆ.

*********************************
ಆಕಾಂಕ್ಷಿತ ಈ ಅಭ್ಯರ್ಥಿಗಳೆಲ್ಲಾ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 5ಸಾವಿರ ರೂ. ಶುಲ್ಕ ಪಾವತಿಸಿ ನಿಗದಿತ ಫಾರಂ ಪಡೆದು 2ಲಕ್ಷ ರೂ. ಡಿಡಿ ಜೊತೆ ಅರ್ಜಿ ಸಲ್ಲಿಸಿದ್ದಾರೆ. 2ಲಕ್ಷ ಡಿಡಿಯೊಂದಿಗೆ ಅರ್ಜಿ ಹಾಕಬೇಕಿರುವುದರಿಂದ ನಾಮಕಾವಸ್ಥೆಗೆ ಅರ್ಜಿ ಹಾಕುವವರೆಲ್ಲಾ ಹಿಂದೆ ಸರಿಯುವಂತಾಗಿದೆ. ಆದರೆ ಪ್ರಾಮಾಣಿಕರು ಏನು ಮಾಡುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಬೇಸರ ವ್ಯಕ್ತಪಡಿಸಿದರು.


ಗುಂಡ್ಲುಪೇಟೆಯಿಂದ ನಂಜಪ್ಪ ಇಂದು ಅರ್ಜಿ ಸಲ್ಲಿಕೆ
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೋರಿ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಅವರು ಗುರುವಾರ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಚಾರವನ್ನು ಅವರು ‘ಆಂದೋಲನ’ಕ್ಕೆ ದೃಢಪಡಿಸಿದ್ದಾರೆ. 1999 ಮತ್ತು 2004ರ ಚುನಾವಣೆಯಲ್ಲಿ ಇವರು ಗುಂಡ್ಲುಪೇಟೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

24 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago