ಜಿಲ್ಲೆಗಳು

ಚಾ.ನಗರ : ಜಿಲ್ಲಾಸ್ಪತ್ರೆ ಮರು ಪ್ರಾರಂಭ, ಹೋರಾಟಗಾರರ ಸಂಭ್ರಮ

ಚಾಮರಾಜನಗರ :ನಗರದ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾ ಕೇಂದ್ರದಲ್ಲಿ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಹೂ ನೀಡಿ ಬರಮಾಡಿಕೊಂಡು ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರ ನಿಜ ಧ್ವನಿ ಗೋವಿಂದರಾಜು ಅವರು ಮಾತನಾಡಿ ಮೆಡಿಕಲ್ ಕಾಲೇಜಿನಿಂದ ಜಿಲ್ಲಾ ಆಸ್ಪತ್ರೆಯನ್ನು ಪ್ರತ್ಯೇಕವಾಗಿ ಉಳಿಸಿ ಎಂದು ಹಲವಾರು ಸಂಘಟನೆಗಳು ಸತತವಾಗಿ ಹೋರಾಟ ಮಾಡಿದ್ದರು ಅದರ ಪರಿಣಾಮವಾಗಿ ಇಂದು ಆಸ್ಪತ್ರೆ ಮರು ಪ್ರಾರಂಭವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ವಿಶ್ವೇಶ್ವರಯ್ಯ, ಡಾ.ಕೃಷ್ಣಪ್ರಸಾದ್, ಡಾ.ಮಹೇಶ್, ಡಾ.ಮಾರುತಿ, ಡಾ.ಮಹೇಶ್ವರ್, ಡಾ.ನವೀನ್ ಚಂದ್ರ, ಹೋರಾಟಗಾರರಾದ ನಮ್ಮನೆ ಪ್ರಶಾಂತ್, ಕದಂಬ ಸೇನೆ ನಾ.ಅಂಬರೀಶ್, ಲಾಯರ್ ಪ್ರಸನ್ನಕುಮಾರ್, ಶಂಭು ನಾಯಕ್, ಜಿಲ್ಲಾಧ್ಯಕ್ಷ ಕುಮಾರ್, ಸಿದ್ಧಾರ್ಥ್, ತಿರು ಮಲ್ಲೇಶ್, ಸಿದ್ದೇಶ್ ಕುಮಾರ್, ಗೋವಿಂದರಾಜು, ಬಾಬು, ಅಸಾದುಲ್ಲಾ ಷರೀಫ್ ಹಾಗೂ ಇತರರು ಭಾಗವಹಿಸಿದ್ದರು.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

21 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

1 hour ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

2 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago