ಜಿಲ್ಲೆಗಳು

ಚಾ.ನಗರ : ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸಲು ಒತ್ತಾಯ

ಚಾಮರಾಜನಗರ: ಭಗವದ್ಗೀತೆಯನ್ನು ಶಿಕ್ಷಣದಲ್ಲಿ ಅಳವಡಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದೆ. ಅದನ್ನು ಬೇಗ ಈಡೇರಿಸಬೇಕು ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು.
ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬುಧವಾರ ಸಂಜೆ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜದಲ್ಲಿ ನೈತಿಕ ಅಧಃಪತನ, ಅಪರಾಧ ಪ್ರವೃತ್ತಿ ಹೆಚ್ಚಾಗಿದೆ. ಇದನ್ನು ತಡೆಯಲು ನೈತಿಕ ಶಿಕ್ಷಣ ಬೇಕಾಗಿದೆ. ಅದು ಈ ಭಗವದ್ಗೀತೆಯಲ್ಲಿದೆ. ಹಾಗಾಗಿ ಶಿಕ್ಷಣದಲ್ಲಿ ಅಳವಡಿಕೆ ಸೂಕ್ತ ಎಂದು ಅಭಿಪ್ರಾಯಪಟ್ಟರು.
ವ್ಯಕ್ತಿತ್ವ ವಿಕಸನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ, ರಾಷ್ಟಿçÃಯ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಈ ಅಭಿಯಾನದ ಉದ್ದೇಶವಾಗಿದೆ. ೨೦೦೭ರಲ್ಲಿ ಅಭಿಯಾನವನು ಆರಂಭಿಸಲಾಗಿತ್ತು. ಜಿಲ್ಲೆಯಲ್ಲೂ ಅಭಿಯಾನವು ನಡೆದಿತ್ತು ಎಂದು ತಿಳಿಸಿದರು.
ತದನಂತರ ಅಭಿಯಾನ ನಿರಂತರವಾಗಿ ನಡೆದಿದೆ. ಮೊದಲ ೪ ವರ್ಷಗಳಲ್ಲಿ ೪ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದೇವು. ನಂತರ ಸಮಗ್ರ ಕರ್ನಾಟಕದಲ್ಲಿ ನಡೆಸಿದ್ದು ಈ ವರ್ಷ ಒಂದು ಜಿಲ್ಲೆಯನ್ನು ಕೇಂದ್ರೀಕರಿಸಲಾಗಿದ್ದು ದಾವಣಗೆರೆ ಜಿಲ್ಲೆಯನ್ನು ಆಯ್ದುಕೊಂಡಿದ್ದೇವೆ ಎಂದು ತಿಳಿಸಿದರು.
ವಿವಿಧತೆಯಲ್ಲಿ ಏಕತೆಯನ್ನು ಕಾಣಲು, ಎಲ್ಲರಲ್ಲೂ ಸಾಮರಸ್ಯ ಮೂಡಿಸಲು, ಸುಶಿಕ್ಷಿತರಲ್ಲಿ ಇರುವ ಸಮಾಜ ಘಾತುಕತನವನ್ನು ಹೋಗಲಾಡಿಸಲು, ಅಪರಾಧ ಮನೋಭಾವ ಕಡಿಮೆ ಮಾಡಲು ಭಗವದ್ಗೀತೆಯನ್ನು ಬೋಧಿಸುವ ಅಗತ್ಯವಿದೆ ಎಂದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

12 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

19 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

19 hours ago