ಜಿಲ್ಲೆಗಳು

ಗ್ರಾಮಕ್ಕೆ ಲಗ್ಗೆ ಇಟ್ಟ ಆನೆ ಹಿಂಡು: ರೈತರು ಕಂಗಾಲು

ಚಾ. ನಗರದ ಅರಕಲವಾಡಿ ,ಲಿಂಗನಪುರದಲ್ಲಿ ಆನೆ ದಾಳಿಗೆ ಬೆಳೆ, ಫಸಲು ನಾಶ
ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ, ಲಿಂಗನಪುರದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಹಿಂಡು ಹಿಂಡಾಗಿ ರೈತರ ಜಮೀನುಗಳಿಗೆ ನುಗ್ಗಿ ಬಾಳೆ, ಮುಸುಕಿನ ಜೋಳ ಹಾಗೂ ತೆಂಗಿನ ಸಸಿಗಳನ್ನು ತಿಂದು ತುಳಿದು ಹಾಳು ಮಾಡಿವೆ.


ಅರಕಲವಾಡಿ ಹನುಮಯ್ಯ ಅವರಿಗೆ ಸೇರಿದ 800 ಬಾಳೆಗಿಡಗಳು ಆನೆ ದಾಳಿಗೆ ಸಿಲುಕಿ ನೆಲಕಚ್ಚಿದೆ. 1ಎಕರೆಯಲ್ಲಿ ಹಾಕಿದ್ದ ಮೂರ್ನಾಲ್ಕು ತಿಂಗಳ ಅವಧಿಯ ಬಾಳೆಯನ್ನು ಸಂಪೂರ್ಣ ಮೇಯ್ದು ಲದ್ದಿ ಹಾಕಿ ಅಡ್ಡಾಡಿವೆ. ಇದೇ ರೀತಿ ತೆಂಗಿನ ಸಸಿಗಳನ್ನು ಕಿತ್ತುಹಾಕಿವೆ. ಕೊಯ್ಲಿಗೆ ಬಂದ ಮುಸುಕಿನ ಜೋಳವನ್ನೂ ನಾಮಾವಶೇಷ ಮಾಡಿವೆ ಎಂದು ರೈತ ಹನುಮಯ್ಯ ಆಂದೋಲನದ ಜತೆ ದು:ಖ ತೋಡಿಕೊಂಡರು.
ಅರಕಲವಾಡಿ ಪಕ್ಕದ ಲಿಂಗನಪುರದಲ್ಲಿ ರಾಮಣ್ಣ ಎಂಬುವರಿಗೆ ಸೇರಿದ 2 ಎಕರೆ ಮುಸುಕಿನ ಜೋಳವನ್ನು ಆನೆಗಳು ಮೇಯ್ದು ಇನ್ನಿಲ್ಲದಂತೆ ಮಾಡಿವೆ.ಇದೇ ರೀತಿ ಸುತ್ತ ಮುತ್ತಲ ರೈತರ ಬೆಳೆಗಳ ಮೇಲೆ ಅಡ್ಡಾಡಿ ಹೋಗಿವೆ.
ತಮಿಳುನಾಡಿನ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಅರಕಲವಾಡಿ ಗ್ರಾಮವಿದ್ಧುಈ ಗ್ರಾಮ ಕೊಂಗಳ್ಳಿಬೆಟ್ಟಕ್ಕೆ
ಸನಿಹದಲ್ಲಿದೆ. ತಮಿಳುನಾಡು ಕಡೆಯಿಂದ ಸುಮಾರು 50 ಆನೆಗಳು ಮಂಗಳವಾರ ರಾತ್ರಿ ಹಿಂಡಾಗಿ ಬಂದು ಬೆಳೆ ನಾಶ ಮಾಡಿವೆ. ಜಮೀನಿನಲ್ಲೇ ವಾಸ ಮಾಡುವ ನಮಗೆ ಭಯ ಆಗುತ್ತಿದೆ ಎಂದು ಅರಕಲವಾಡಿ ರೈತ ಹನುಮಯ್ಯ ಅತಂಕ ತೋಡಿಕೊಂಡಿದ್ದಾರೆ.

ಮೂರು ಗುಂಪಾಗಿವೆ ಆನೆಗಳ ಹಿಂಡು..
ತಮಿಳುನಾಡಿನ ಸತ್ಯಮಂಗಲ ಅರಣ್ಯದ ಜೀರಗಹಳ್ಳಿವಲಯದಿಂದ ಅರಳವಾಡಿ ಮಾರ್ಗ ವಾಗಿ ಅರಕಲವಾಡಿಗೆ ಬಂದಿದ್ದ ಹಿಂಡು ಆನೆಗಳನ್ನು ಓಡಿಸುವ ಸಂದರ್ಭ ದಲ್ಲಿ ಆನೆಗಳು 3ಗುಂಪುಗಳಾಗಿದ್ದು ಅದರಲ್ಲಿ ಆರು
ಅರಕಲವಾಡಿಯಲ್ಲಿಯೇ ಬೀಡು ಬಿಟ್ಟಿದ್ದವು. ಆನೆಗಳು ಹೋದ ಕಡೆಯಲ್ಲೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸಿ ಪಟಾಕಿ ಸಿಡಿಸಿ ಓಡಿಸ ಲಾಯಿತು. ಕೆ.ಗುಡಿ, ಪುಣಜನೂರು, ನಗರ ಸೇರಿದಂತೆ ಮೂರೂ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಗಳನ್ನು ಬೆನ್ನತ್ತಿದ್ದರು. ಎಸಿಎಫ್ ಸುರೇಶ್, ಆರ್ ಎಫ್ ಒ ವಿನೋದ್ ಗೌಡ ಒಳಗೊಂಡಂತೆ ಆರ್ ಆರ್ ಟಿ ತಂಡ,ವಾಚರ್ ಮತ್ತು ಗಾರ್ಡ್ ಗಳು ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.
ಆನೆಗಳನ್ನು ನಮ್ಮ ಸಿಬ್ಬಂದಿ ಕಾಡಿಗೆ ಅಟ್ಟುವಲ್ಲಿ ನಿರತರಾಗಿದ್ದಾರೆ. ಸಂಜೆಯಾದರೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿ ಆರ್ ಟಿ. ಟೈಗರ್‌ ಪ್ರಾಜೆಕ್ಟ್ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.

andolanait

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

14 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

40 mins ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

57 mins ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

2 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago