ಜಿಲ್ಲೆಗಳು

ಗ್ರಾಮಕ್ಕೆ ಲಗ್ಗೆ ಇಟ್ಟ ಆನೆ ಹಿಂಡು: ರೈತರು ಕಂಗಾಲು

ಚಾ. ನಗರದ ಅರಕಲವಾಡಿ ,ಲಿಂಗನಪುರದಲ್ಲಿ ಆನೆ ದಾಳಿಗೆ ಬೆಳೆ, ಫಸಲು ನಾಶ
ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ, ಲಿಂಗನಪುರದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಹಿಂಡು ಹಿಂಡಾಗಿ ರೈತರ ಜಮೀನುಗಳಿಗೆ ನುಗ್ಗಿ ಬಾಳೆ, ಮುಸುಕಿನ ಜೋಳ ಹಾಗೂ ತೆಂಗಿನ ಸಸಿಗಳನ್ನು ತಿಂದು ತುಳಿದು ಹಾಳು ಮಾಡಿವೆ.


ಅರಕಲವಾಡಿ ಹನುಮಯ್ಯ ಅವರಿಗೆ ಸೇರಿದ 800 ಬಾಳೆಗಿಡಗಳು ಆನೆ ದಾಳಿಗೆ ಸಿಲುಕಿ ನೆಲಕಚ್ಚಿದೆ. 1ಎಕರೆಯಲ್ಲಿ ಹಾಕಿದ್ದ ಮೂರ್ನಾಲ್ಕು ತಿಂಗಳ ಅವಧಿಯ ಬಾಳೆಯನ್ನು ಸಂಪೂರ್ಣ ಮೇಯ್ದು ಲದ್ದಿ ಹಾಕಿ ಅಡ್ಡಾಡಿವೆ. ಇದೇ ರೀತಿ ತೆಂಗಿನ ಸಸಿಗಳನ್ನು ಕಿತ್ತುಹಾಕಿವೆ. ಕೊಯ್ಲಿಗೆ ಬಂದ ಮುಸುಕಿನ ಜೋಳವನ್ನೂ ನಾಮಾವಶೇಷ ಮಾಡಿವೆ ಎಂದು ರೈತ ಹನುಮಯ್ಯ ಆಂದೋಲನದ ಜತೆ ದು:ಖ ತೋಡಿಕೊಂಡರು.
ಅರಕಲವಾಡಿ ಪಕ್ಕದ ಲಿಂಗನಪುರದಲ್ಲಿ ರಾಮಣ್ಣ ಎಂಬುವರಿಗೆ ಸೇರಿದ 2 ಎಕರೆ ಮುಸುಕಿನ ಜೋಳವನ್ನು ಆನೆಗಳು ಮೇಯ್ದು ಇನ್ನಿಲ್ಲದಂತೆ ಮಾಡಿವೆ.ಇದೇ ರೀತಿ ಸುತ್ತ ಮುತ್ತಲ ರೈತರ ಬೆಳೆಗಳ ಮೇಲೆ ಅಡ್ಡಾಡಿ ಹೋಗಿವೆ.
ತಮಿಳುನಾಡಿನ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಅರಕಲವಾಡಿ ಗ್ರಾಮವಿದ್ಧುಈ ಗ್ರಾಮ ಕೊಂಗಳ್ಳಿಬೆಟ್ಟಕ್ಕೆ
ಸನಿಹದಲ್ಲಿದೆ. ತಮಿಳುನಾಡು ಕಡೆಯಿಂದ ಸುಮಾರು 50 ಆನೆಗಳು ಮಂಗಳವಾರ ರಾತ್ರಿ ಹಿಂಡಾಗಿ ಬಂದು ಬೆಳೆ ನಾಶ ಮಾಡಿವೆ. ಜಮೀನಿನಲ್ಲೇ ವಾಸ ಮಾಡುವ ನಮಗೆ ಭಯ ಆಗುತ್ತಿದೆ ಎಂದು ಅರಕಲವಾಡಿ ರೈತ ಹನುಮಯ್ಯ ಅತಂಕ ತೋಡಿಕೊಂಡಿದ್ದಾರೆ.

ಮೂರು ಗುಂಪಾಗಿವೆ ಆನೆಗಳ ಹಿಂಡು..
ತಮಿಳುನಾಡಿನ ಸತ್ಯಮಂಗಲ ಅರಣ್ಯದ ಜೀರಗಹಳ್ಳಿವಲಯದಿಂದ ಅರಳವಾಡಿ ಮಾರ್ಗ ವಾಗಿ ಅರಕಲವಾಡಿಗೆ ಬಂದಿದ್ದ ಹಿಂಡು ಆನೆಗಳನ್ನು ಓಡಿಸುವ ಸಂದರ್ಭ ದಲ್ಲಿ ಆನೆಗಳು 3ಗುಂಪುಗಳಾಗಿದ್ದು ಅದರಲ್ಲಿ ಆರು
ಅರಕಲವಾಡಿಯಲ್ಲಿಯೇ ಬೀಡು ಬಿಟ್ಟಿದ್ದವು. ಆನೆಗಳು ಹೋದ ಕಡೆಯಲ್ಲೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸಿ ಪಟಾಕಿ ಸಿಡಿಸಿ ಓಡಿಸ ಲಾಯಿತು. ಕೆ.ಗುಡಿ, ಪುಣಜನೂರು, ನಗರ ಸೇರಿದಂತೆ ಮೂರೂ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಗಳನ್ನು ಬೆನ್ನತ್ತಿದ್ದರು. ಎಸಿಎಫ್ ಸುರೇಶ್, ಆರ್ ಎಫ್ ಒ ವಿನೋದ್ ಗೌಡ ಒಳಗೊಂಡಂತೆ ಆರ್ ಆರ್ ಟಿ ತಂಡ,ವಾಚರ್ ಮತ್ತು ಗಾರ್ಡ್ ಗಳು ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.
ಆನೆಗಳನ್ನು ನಮ್ಮ ಸಿಬ್ಬಂದಿ ಕಾಡಿಗೆ ಅಟ್ಟುವಲ್ಲಿ ನಿರತರಾಗಿದ್ದಾರೆ. ಸಂಜೆಯಾದರೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿ ಆರ್ ಟಿ. ಟೈಗರ್‌ ಪ್ರಾಜೆಕ್ಟ್ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

2 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

3 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

3 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

3 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

3 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago