ಜಿಲ್ಲೆಗಳು

ಗ್ರಾಮಕ್ಕೆ ಲಗ್ಗೆ ಇಟ್ಟ ಆನೆ ಹಿಂಡು: ರೈತರು ಕಂಗಾಲು

ಚಾ. ನಗರದ ಅರಕಲವಾಡಿ ,ಲಿಂಗನಪುರದಲ್ಲಿ ಆನೆ ದಾಳಿಗೆ ಬೆಳೆ, ಫಸಲು ನಾಶ
ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ, ಲಿಂಗನಪುರದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಹಿಂಡು ಹಿಂಡಾಗಿ ರೈತರ ಜಮೀನುಗಳಿಗೆ ನುಗ್ಗಿ ಬಾಳೆ, ಮುಸುಕಿನ ಜೋಳ ಹಾಗೂ ತೆಂಗಿನ ಸಸಿಗಳನ್ನು ತಿಂದು ತುಳಿದು ಹಾಳು ಮಾಡಿವೆ.


ಅರಕಲವಾಡಿ ಹನುಮಯ್ಯ ಅವರಿಗೆ ಸೇರಿದ 800 ಬಾಳೆಗಿಡಗಳು ಆನೆ ದಾಳಿಗೆ ಸಿಲುಕಿ ನೆಲಕಚ್ಚಿದೆ. 1ಎಕರೆಯಲ್ಲಿ ಹಾಕಿದ್ದ ಮೂರ್ನಾಲ್ಕು ತಿಂಗಳ ಅವಧಿಯ ಬಾಳೆಯನ್ನು ಸಂಪೂರ್ಣ ಮೇಯ್ದು ಲದ್ದಿ ಹಾಕಿ ಅಡ್ಡಾಡಿವೆ. ಇದೇ ರೀತಿ ತೆಂಗಿನ ಸಸಿಗಳನ್ನು ಕಿತ್ತುಹಾಕಿವೆ. ಕೊಯ್ಲಿಗೆ ಬಂದ ಮುಸುಕಿನ ಜೋಳವನ್ನೂ ನಾಮಾವಶೇಷ ಮಾಡಿವೆ ಎಂದು ರೈತ ಹನುಮಯ್ಯ ಆಂದೋಲನದ ಜತೆ ದು:ಖ ತೋಡಿಕೊಂಡರು.
ಅರಕಲವಾಡಿ ಪಕ್ಕದ ಲಿಂಗನಪುರದಲ್ಲಿ ರಾಮಣ್ಣ ಎಂಬುವರಿಗೆ ಸೇರಿದ 2 ಎಕರೆ ಮುಸುಕಿನ ಜೋಳವನ್ನು ಆನೆಗಳು ಮೇಯ್ದು ಇನ್ನಿಲ್ಲದಂತೆ ಮಾಡಿವೆ.ಇದೇ ರೀತಿ ಸುತ್ತ ಮುತ್ತಲ ರೈತರ ಬೆಳೆಗಳ ಮೇಲೆ ಅಡ್ಡಾಡಿ ಹೋಗಿವೆ.
ತಮಿಳುನಾಡಿನ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಅರಕಲವಾಡಿ ಗ್ರಾಮವಿದ್ಧುಈ ಗ್ರಾಮ ಕೊಂಗಳ್ಳಿಬೆಟ್ಟಕ್ಕೆ
ಸನಿಹದಲ್ಲಿದೆ. ತಮಿಳುನಾಡು ಕಡೆಯಿಂದ ಸುಮಾರು 50 ಆನೆಗಳು ಮಂಗಳವಾರ ರಾತ್ರಿ ಹಿಂಡಾಗಿ ಬಂದು ಬೆಳೆ ನಾಶ ಮಾಡಿವೆ. ಜಮೀನಿನಲ್ಲೇ ವಾಸ ಮಾಡುವ ನಮಗೆ ಭಯ ಆಗುತ್ತಿದೆ ಎಂದು ಅರಕಲವಾಡಿ ರೈತ ಹನುಮಯ್ಯ ಅತಂಕ ತೋಡಿಕೊಂಡಿದ್ದಾರೆ.

ಮೂರು ಗುಂಪಾಗಿವೆ ಆನೆಗಳ ಹಿಂಡು..
ತಮಿಳುನಾಡಿನ ಸತ್ಯಮಂಗಲ ಅರಣ್ಯದ ಜೀರಗಹಳ್ಳಿವಲಯದಿಂದ ಅರಳವಾಡಿ ಮಾರ್ಗ ವಾಗಿ ಅರಕಲವಾಡಿಗೆ ಬಂದಿದ್ದ ಹಿಂಡು ಆನೆಗಳನ್ನು ಓಡಿಸುವ ಸಂದರ್ಭ ದಲ್ಲಿ ಆನೆಗಳು 3ಗುಂಪುಗಳಾಗಿದ್ದು ಅದರಲ್ಲಿ ಆರು
ಅರಕಲವಾಡಿಯಲ್ಲಿಯೇ ಬೀಡು ಬಿಟ್ಟಿದ್ದವು. ಆನೆಗಳು ಹೋದ ಕಡೆಯಲ್ಲೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸಿ ಪಟಾಕಿ ಸಿಡಿಸಿ ಓಡಿಸ ಲಾಯಿತು. ಕೆ.ಗುಡಿ, ಪುಣಜನೂರು, ನಗರ ಸೇರಿದಂತೆ ಮೂರೂ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಗಳನ್ನು ಬೆನ್ನತ್ತಿದ್ದರು. ಎಸಿಎಫ್ ಸುರೇಶ್, ಆರ್ ಎಫ್ ಒ ವಿನೋದ್ ಗೌಡ ಒಳಗೊಂಡಂತೆ ಆರ್ ಆರ್ ಟಿ ತಂಡ,ವಾಚರ್ ಮತ್ತು ಗಾರ್ಡ್ ಗಳು ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.
ಆನೆಗಳನ್ನು ನಮ್ಮ ಸಿಬ್ಬಂದಿ ಕಾಡಿಗೆ ಅಟ್ಟುವಲ್ಲಿ ನಿರತರಾಗಿದ್ದಾರೆ. ಸಂಜೆಯಾದರೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿ ಆರ್ ಟಿ. ಟೈಗರ್‌ ಪ್ರಾಜೆಕ್ಟ್ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.

andolanait

Recent Posts

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

3 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

3 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

18 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

21 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

24 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

1 day ago