ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದಲ್ಲಿ ಚರ್ಮಗಂಟು ರೋಗಕ್ಕೆ ಹಸು ಕರು ಬಲಿಯಾದ ನಂತರ ಎಚ್ಚೆತ ಪಶು ವೈದ್ಯಾಧಿಕಾರಿಗಳು ಇಂದು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.
ಗುರುವಾರ ಪಚ್ಚೆ ದೊಡ್ಡಿ ಗ್ರಾಮದ ಮಾದೇಗೌಡ ಎಂಬವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಚರ್ಮಗಂಟು ರೋಗಕ್ಕೆ ಬಲಿಯಾಗಿತ್ತು. ಚರ್ಮ ಗಂಟು ರೋಗದ ಬಗ್ಗೆ ಹಲವಾರು ಬಾರಿ ಪಶು ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತಿಳಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ, ಹಸು ಮತ್ತು ಕರು ಮೃತಪಟ್ಟ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪಶು ಇಲಾಖೆಯ ಉಪನಿರ್ದೇಶಕ ಶಿವಣ್ಣರವರ ಮಾರ್ಗದರ್ಶನದಲ್ಲಿ ಮೂರು ಪಶು ವೈದ್ಯಾಧಿಕಾರಿಗಳು ಹಾಗೂ 12 ಹೆಲ್ತ್ ಇನ್ಸ್ಪೆಕ್ಟರ್ ಗಳು ಪಚ್ಚೆದೊಡ್ಡಿ ಹಾಗೂ ರಾಮಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಚರ್ಮಗಂಟು ಹೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಿದ್ದಾರೆ.
ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಚರ್ಮ ಗಂಟು ನಿಯಂತ್ರಣಕ್ಕೆ ಚಿಕಿತ್ಸೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿಕಿತ್ಸೆ ನೀಡಿರುವುದರಿಂದ ಚರ್ಮ ಗಂಟು ರೋಗ ಜಿಲ್ಲೆಯಾದ್ಯಂತ ಕಡಿಮೆಯಾಗಿದೆ.
ಶಿವಣ್ಣ ಉಪನಿರ್ದೇಶಕ ಪಶುಪಾಲನ ಇಲಾಖೆ ಚಾ. ನಗರ
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…