ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದಲ್ಲಿ ಚರ್ಮಗಂಟು ರೋಗಕ್ಕೆ ಹಸು ಕರು ಬಲಿಯಾದ ನಂತರ ಎಚ್ಚೆತ ಪಶು ವೈದ್ಯಾಧಿಕಾರಿಗಳು ಇಂದು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.
ಗುರುವಾರ ಪಚ್ಚೆ ದೊಡ್ಡಿ ಗ್ರಾಮದ ಮಾದೇಗೌಡ ಎಂಬವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಚರ್ಮಗಂಟು ರೋಗಕ್ಕೆ ಬಲಿಯಾಗಿತ್ತು. ಚರ್ಮ ಗಂಟು ರೋಗದ ಬಗ್ಗೆ ಹಲವಾರು ಬಾರಿ ಪಶು ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತಿಳಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ, ಹಸು ಮತ್ತು ಕರು ಮೃತಪಟ್ಟ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪಶು ಇಲಾಖೆಯ ಉಪನಿರ್ದೇಶಕ ಶಿವಣ್ಣರವರ ಮಾರ್ಗದರ್ಶನದಲ್ಲಿ ಮೂರು ಪಶು ವೈದ್ಯಾಧಿಕಾರಿಗಳು ಹಾಗೂ 12 ಹೆಲ್ತ್ ಇನ್ಸ್ಪೆಕ್ಟರ್ ಗಳು ಪಚ್ಚೆದೊಡ್ಡಿ ಹಾಗೂ ರಾಮಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಚರ್ಮಗಂಟು ಹೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಿದ್ದಾರೆ.
ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಚರ್ಮ ಗಂಟು ನಿಯಂತ್ರಣಕ್ಕೆ ಚಿಕಿತ್ಸೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿಕಿತ್ಸೆ ನೀಡಿರುವುದರಿಂದ ಚರ್ಮ ಗಂಟು ರೋಗ ಜಿಲ್ಲೆಯಾದ್ಯಂತ ಕಡಿಮೆಯಾಗಿದೆ.
ಶಿವಣ್ಣ ಉಪನಿರ್ದೇಶಕ ಪಶುಪಾಲನ ಇಲಾಖೆ ಚಾ. ನಗರ
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…