ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಸಂಬಂಧ ಮಾಜಿ ಶಾಸಕಿ ಪರಿಮಳ ನಾಗಪ್ಪ ರವರ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನನ್ನ ಪತಿಯವರಾದ ದಿವಂಗತ ಎಚ್ ನಾಗಪ್ಪನವರು ಹನೂರು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಅದರಂತೆ ನಾನು ಶಾಸಕಿಯಾಗಿದ್ದಾಗಲೂ ಸಹ ನನ್ನ ಕೈಲಾದ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ಪಡಿಸಿದ್ದೇನೆ. ಎಲ್ಲಾ ಸಮಾಜದವರು ಸಹ ನಮ್ಮ ಮೇಲೆ ಅದೇ ವಿಶ್ವಾಸ ಪ್ರೀತಿ ಇಟ್ಟಿದ್ದಾರೆ.ಕಳೆದ ಮೂರು ಚುನಾವಣೆಯಲ್ಲಿ ನಿರಂತರವಾಗಿ ಸೋಲುತ್ತಿದ್ದೇವೆ ಇದಕ್ಕೆ ಕಾರಣ ಇನ್ನು ತಿಳಿಯಲಾಗಿಲ್ಲ, ನಮ್ಮ ಕುಟುಂಬದ ಮೇಲೆ ಕೆಲವೊಂದು ಆಪಾದನೆ ಇದೆ ರಾಜಕೀಯ ಎಂದ ಮೇಲೆ ಆಪಾದನೆ ಸಹಜ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ,ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಬೆಳೆಸುವುದು ನಿಮ್ಮ ಜವಾಬ್ದಾರಿ, ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ 25 ಸಾವಿರ ಕ್ಕೂ ಹೆಚ್ಚು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಲ್ಲಾ ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುಂದಿನ ಜನವರಿ 3ರಂದು ಹಮ್ಮಿಕೊಂಡಿರುವ ಎಚ್ ನಾಗಪ್ಪನವರ 20ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ರೂಪರೇಷ ಹಾಗೂ ಆಯೋಜನದ ಬಗ್ಗೆ ಕಾರ್ಯಕರ್ತರು ಹಾಗೂ ನಾಗಪ್ಪ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಣ್ಣೂರು ಬಸವರಾಜಪ್ಪ, ಬಿಜೆಪಿ ಮಂಡಲದ ಕಾರ್ಯದರ್ಶಿ ಭರತ್,ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ದಿವಂಗತ ಎಚ್ ನಾಗಪ್ಪ ರವರ ಸುಪುತ್ರ ಡಾ. ಪ್ರೀತಮ್ ನಾಗಪ್ಪ, ಗ್ರಾಪಂ ಸದಸ್ಯ ನಾಗರಾಜು,ಮುಖಂಡರಾದ ತೋಟೇಶ್, ಹನೂರು ನಂಜಪ್ಪ ಸೇರಿದಂತೆ ನಾಗಪ್ಪ ಅಭಿಮಾನಿಗಳು ಹಾಜರಿದ್ದರು.
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…