ಜಿಲ್ಲೆಗಳು

ದಿ. ನಾಗಪ್ಪ ಪುಣ್ಯಸ್ಮರಣೆ ಅಂಗವಾಗಿ ಪೂರ್ವಭಾವಿ ಸಭೆ

ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಸಂಬಂಧ ಮಾಜಿ ಶಾಸಕಿ ಪರಿಮಳ ನಾಗಪ್ಪ ರವರ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ನನ್ನ ಪತಿಯವರಾದ ದಿವಂಗತ ಎಚ್ ನಾಗಪ್ಪನವರು ಹನೂರು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಅದರಂತೆ ನಾನು ಶಾಸಕಿಯಾಗಿದ್ದಾಗಲೂ ಸಹ ನನ್ನ ಕೈಲಾದ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ಪಡಿಸಿದ್ದೇನೆ. ಎಲ್ಲಾ ಸಮಾಜದವರು ಸಹ ನಮ್ಮ ಮೇಲೆ ಅದೇ ವಿಶ್ವಾಸ ಪ್ರೀತಿ ಇಟ್ಟಿದ್ದಾರೆ.ಕಳೆದ ಮೂರು ಚುನಾವಣೆಯಲ್ಲಿ ನಿರಂತರವಾಗಿ ಸೋಲುತ್ತಿದ್ದೇವೆ ಇದಕ್ಕೆ ಕಾರಣ ಇನ್ನು ತಿಳಿಯಲಾಗಿಲ್ಲ, ನಮ್ಮ ಕುಟುಂಬದ ಮೇಲೆ ಕೆಲವೊಂದು ಆಪಾದನೆ ಇದೆ ರಾಜಕೀಯ ಎಂದ ಮೇಲೆ ಆಪಾದನೆ ಸಹಜ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ,ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಬೆಳೆಸುವುದು ನಿಮ್ಮ ಜವಾಬ್ದಾರಿ, ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ 25 ಸಾವಿರ ಕ್ಕೂ ಹೆಚ್ಚು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಲ್ಲಾ ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ಜನವರಿ 3ರಂದು ಹಮ್ಮಿಕೊಂಡಿರುವ ಎಚ್ ನಾಗಪ್ಪನವರ 20ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ರೂಪರೇಷ ಹಾಗೂ ಆಯೋಜನದ ಬಗ್ಗೆ ಕಾರ್ಯಕರ್ತರು ಹಾಗೂ ನಾಗಪ್ಪ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಣ್ಣೂರು ಬಸವರಾಜಪ್ಪ, ಬಿಜೆಪಿ ಮಂಡಲದ ಕಾರ್ಯದರ್ಶಿ ಭರತ್,ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ದಿವಂಗತ ಎಚ್ ನಾಗಪ್ಪ ರವರ ಸುಪುತ್ರ ಡಾ. ಪ್ರೀತಮ್ ನಾಗಪ್ಪ, ಗ್ರಾಪಂ ಸದಸ್ಯ ನಾಗರಾಜು,ಮುಖಂಡರಾದ ತೋಟೇಶ್, ಹನೂರು ನಂಜಪ್ಪ ಸೇರಿದಂತೆ ನಾಗಪ್ಪ ಅಭಿಮಾನಿಗಳು ಹಾಜರಿದ್ದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

47 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago