ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಸಂಬಂಧ ಮಾಜಿ ಶಾಸಕಿ ಪರಿಮಳ ನಾಗಪ್ಪ ರವರ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನನ್ನ ಪತಿಯವರಾದ ದಿವಂಗತ ಎಚ್ ನಾಗಪ್ಪನವರು ಹನೂರು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಅದರಂತೆ ನಾನು ಶಾಸಕಿಯಾಗಿದ್ದಾಗಲೂ ಸಹ ನನ್ನ ಕೈಲಾದ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ಪಡಿಸಿದ್ದೇನೆ. ಎಲ್ಲಾ ಸಮಾಜದವರು ಸಹ ನಮ್ಮ ಮೇಲೆ ಅದೇ ವಿಶ್ವಾಸ ಪ್ರೀತಿ ಇಟ್ಟಿದ್ದಾರೆ.ಕಳೆದ ಮೂರು ಚುನಾವಣೆಯಲ್ಲಿ ನಿರಂತರವಾಗಿ ಸೋಲುತ್ತಿದ್ದೇವೆ ಇದಕ್ಕೆ ಕಾರಣ ಇನ್ನು ತಿಳಿಯಲಾಗಿಲ್ಲ, ನಮ್ಮ ಕುಟುಂಬದ ಮೇಲೆ ಕೆಲವೊಂದು ಆಪಾದನೆ ಇದೆ ರಾಜಕೀಯ ಎಂದ ಮೇಲೆ ಆಪಾದನೆ ಸಹಜ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ,ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಬೆಳೆಸುವುದು ನಿಮ್ಮ ಜವಾಬ್ದಾರಿ, ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ 25 ಸಾವಿರ ಕ್ಕೂ ಹೆಚ್ಚು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಲ್ಲಾ ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುಂದಿನ ಜನವರಿ 3ರಂದು ಹಮ್ಮಿಕೊಂಡಿರುವ ಎಚ್ ನಾಗಪ್ಪನವರ 20ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ರೂಪರೇಷ ಹಾಗೂ ಆಯೋಜನದ ಬಗ್ಗೆ ಕಾರ್ಯಕರ್ತರು ಹಾಗೂ ನಾಗಪ್ಪ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಣ್ಣೂರು ಬಸವರಾಜಪ್ಪ, ಬಿಜೆಪಿ ಮಂಡಲದ ಕಾರ್ಯದರ್ಶಿ ಭರತ್,ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ದಿವಂಗತ ಎಚ್ ನಾಗಪ್ಪ ರವರ ಸುಪುತ್ರ ಡಾ. ಪ್ರೀತಮ್ ನಾಗಪ್ಪ, ಗ್ರಾಪಂ ಸದಸ್ಯ ನಾಗರಾಜು,ಮುಖಂಡರಾದ ತೋಟೇಶ್, ಹನೂರು ನಂಜಪ್ಪ ಸೇರಿದಂತೆ ನಾಗಪ್ಪ ಅಭಿಮಾನಿಗಳು ಹಾಜರಿದ್ದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…