ಜಿಲ್ಲೆಗಳು

ದಿ. ನಾಗಪ್ಪ ಪುಣ್ಯಸ್ಮರಣೆ ಅಂಗವಾಗಿ ಪೂರ್ವಭಾವಿ ಸಭೆ

ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ ರವರ ಪುಣ್ಯಸ್ಮರಣೆ ಕಾರ್ಯಕ್ರಮ ಸಂಬಂಧ ಮಾಜಿ ಶಾಸಕಿ ಪರಿಮಳ ನಾಗಪ್ಪ ರವರ ನಿವಾಸದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ನನ್ನ ಪತಿಯವರಾದ ದಿವಂಗತ ಎಚ್ ನಾಗಪ್ಪನವರು ಹನೂರು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಅದರಂತೆ ನಾನು ಶಾಸಕಿಯಾಗಿದ್ದಾಗಲೂ ಸಹ ನನ್ನ ಕೈಲಾದ ಮಟ್ಟಿಗೆ ಕ್ಷೇತ್ರದ ಅಭಿವೃದ್ಧಿ ಪಡಿಸಿದ್ದೇನೆ. ಎಲ್ಲಾ ಸಮಾಜದವರು ಸಹ ನಮ್ಮ ಮೇಲೆ ಅದೇ ವಿಶ್ವಾಸ ಪ್ರೀತಿ ಇಟ್ಟಿದ್ದಾರೆ.ಕಳೆದ ಮೂರು ಚುನಾವಣೆಯಲ್ಲಿ ನಿರಂತರವಾಗಿ ಸೋಲುತ್ತಿದ್ದೇವೆ ಇದಕ್ಕೆ ಕಾರಣ ಇನ್ನು ತಿಳಿಯಲಾಗಿಲ್ಲ, ನಮ್ಮ ಕುಟುಂಬದ ಮೇಲೆ ಕೆಲವೊಂದು ಆಪಾದನೆ ಇದೆ ರಾಜಕೀಯ ಎಂದ ಮೇಲೆ ಆಪಾದನೆ ಸಹಜ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇವೆ,ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಬೆಳೆಸುವುದು ನಿಮ್ಮ ಜವಾಬ್ದಾರಿ, ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ 25 ಸಾವಿರ ಕ್ಕೂ ಹೆಚ್ಚು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕೆಂದಿದ್ದೇವೆ ಎಲ್ಲಾ ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ಜನವರಿ 3ರಂದು ಹಮ್ಮಿಕೊಂಡಿರುವ ಎಚ್ ನಾಗಪ್ಪನವರ 20ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ರೂಪರೇಷ ಹಾಗೂ ಆಯೋಜನದ ಬಗ್ಗೆ ಕಾರ್ಯಕರ್ತರು ಹಾಗೂ ನಾಗಪ್ಪ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕಣ್ಣೂರು ಬಸವರಾಜಪ್ಪ, ಬಿಜೆಪಿ ಮಂಡಲದ ಕಾರ್ಯದರ್ಶಿ ಭರತ್,ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ದಿವಂಗತ ಎಚ್ ನಾಗಪ್ಪ ರವರ ಸುಪುತ್ರ ಡಾ. ಪ್ರೀತಮ್ ನಾಗಪ್ಪ, ಗ್ರಾಪಂ ಸದಸ್ಯ ನಾಗರಾಜು,ಮುಖಂಡರಾದ ತೋಟೇಶ್, ಹನೂರು ನಂಜಪ್ಪ ಸೇರಿದಂತೆ ನಾಗಪ್ಪ ಅಭಿಮಾನಿಗಳು ಹಾಜರಿದ್ದರು.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago