ಹನೂರು :ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ಬೈಲೂರು ಗ್ರಾಮ ಪಂಚಾಯಿತಿಗೆ ಸೇರಿದ ಅರೆಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದಲ್ಲಿ 300 ಕುಟುಂಬಗಳಿದ್ದು 500ಕ್ಕೂ ಹೆಚ್ಚು ಮತದಾರರಿದ್ದಾರೆ.
ಪ್ರತಿಭಟನೆ ವೇಳೆ ಗ್ರಾಮದ ಕುಳ್ಳ ಮಾದೇವ ಮಾತನಾಡಿ ನಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಪ್ರತಿನಿತ್ಯ ನಮ್ಮ ಎಂಟು ಕಿಲೋಮೀಟರ್ ನಡೆದು ಶಾಲೆಗೆ ಹೋಗಬೇಕಿದೆ. ಇದರಿಂದ ತರಗತಿಗಳಿಗೆ ಸರಿಯಾದ ಸಂದರ್ಭಕ್ಕೆ ಹೋಗಲು ಸಾಧ್ಯವಾಗದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವುದಿಲ್ಲ, ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿನಿ ಅಶ್ವಿನಿ ಮಾತನಾಡಿ ನಮ್ಮ ಗ್ರಾಮಕ್ಕೆ ಸಮರ್ಪಕವಾದ ರಸ್ತೆ ಇದೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಬೈಲೂರು ಪ್ರೌಢಶಾಲೆಗೆ ನಡೆದುಕೊಂಡು ಹೋಗಬೇಕಿದೆ, ಮಳೆ ಬಂದಂತಹ ಸಂದರ್ಭದಲ್ಲಿ ನೆನೆದುಕೊಂಡು ಹೋಗುತ್ತಿದ್ದೇವೆ, ಚುನಾವಣೆ ಸಂದರ್ಭದಲ್ಲಿ ಮತದಾನ ಕೇಳಲು ಬರುವ ಜನಪ್ರತಿನಿಧಿಗಳಿಗೆ ನಮ್ಮ ಕಷ್ಟ ಪರಿಹರಿಸುವ ಸೌಜನ್ಯವಿಲ್ಲ ಎಂದು ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಅರೆ ಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್ ರವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದೇನೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು.
ಆರ್ ನರೇಂದ್ರ ಶಾಸಕರು ಹನೂರು ವಿಧಾನಸಭಾ ಕ್ಷೇತ್ರ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…