ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು.
ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳಿದ್ದು, ಎಲ್ಲರೂ ಸಹ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಮಧ್ಯೆ ಗ್ರಾಮದಲ್ಲಿ ಮೂವರು ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದರಿಂದ ಕುಡಿತಕ್ಕೆ ದಾಸರಾಗಿದ್ದಾರೆ. ಕೂಲಿ ಹಣವನ್ನೇಲ್ಲ ಕುಡಿತಕ್ಕೆ ವ್ಯಹಿಸುತ್ತಿದ್ದಾರೆ. ಇದರಿಂದ ಸಂಸಾರದಲ್ಲಿ ಗಲಭೆ ಜರುಗುತ್ತಿದ್ದು ಇದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದೆ.ಜೊತೆಗೆ ಯುವಕರು ಸಹ ಮಧ್ಯದ ದಾಸರಾಗುತ್ತಿದ್ದಾರೆ. ಮದ್ಯ ಮಾರಾಟವನ್ನು ನಿಷೇಧಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಆದ್ದರಿಂದ ಈ ಬಗ್ಗೆ ಇನ್ನಾದರೂ ಕ್ರಮ ಕೈಗೊಂಡು ಗ್ರಾಮದಲ್ಲಿ ಮಧ್ಯ ಮಾರಾಟವನ್ನು ನಿಲ್ಲಿಸಿ ಎಂದು ಮಹಿಳೆಯರು ಒತ್ತಾಯಿಸಿದರು.
ಎಎಸ್ಐ ರವಿಕುಮಾರ್ ಮಾತನಾಡಿ ವೃತ ನಿರೀಕ್ಷಕ ಸಂತೋಷ ಕಶ್ಯಪ್ ರವರ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಗುವುದು. ಇದಕ್ಕೂ ಮಿತಿಮೀರಿ ಅವರು ಮಧ್ಯ ಮಾರಾಟ ಮಾಡಿದರೆ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಈರಮ್ಮ, ದಾಸಮ್ಮ, ಕೆಂಪಮ್ಮ, ಮಾದಮ್ಮ, ಬೋಮ್ಮಮ್ಮ, ಬಸಮ್ಮ, ದುಂಡಮ್ಮ, ಪುಟ್ಟಮ್ಮ ಇನ್ನಿತರರು ಹಾಜರಿದ್ದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…