ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು.
ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳಿದ್ದು, ಎಲ್ಲರೂ ಸಹ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಮಧ್ಯೆ ಗ್ರಾಮದಲ್ಲಿ ಮೂವರು ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದರಿಂದ ಕುಡಿತಕ್ಕೆ ದಾಸರಾಗಿದ್ದಾರೆ. ಕೂಲಿ ಹಣವನ್ನೇಲ್ಲ ಕುಡಿತಕ್ಕೆ ವ್ಯಹಿಸುತ್ತಿದ್ದಾರೆ. ಇದರಿಂದ ಸಂಸಾರದಲ್ಲಿ ಗಲಭೆ ಜರುಗುತ್ತಿದ್ದು ಇದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದೆ.ಜೊತೆಗೆ ಯುವಕರು ಸಹ ಮಧ್ಯದ ದಾಸರಾಗುತ್ತಿದ್ದಾರೆ. ಮದ್ಯ ಮಾರಾಟವನ್ನು ನಿಷೇಧಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಆದ್ದರಿಂದ ಈ ಬಗ್ಗೆ ಇನ್ನಾದರೂ ಕ್ರಮ ಕೈಗೊಂಡು ಗ್ರಾಮದಲ್ಲಿ ಮಧ್ಯ ಮಾರಾಟವನ್ನು ನಿಲ್ಲಿಸಿ ಎಂದು ಮಹಿಳೆಯರು ಒತ್ತಾಯಿಸಿದರು.
ಎಎಸ್ಐ ರವಿಕುಮಾರ್ ಮಾತನಾಡಿ ವೃತ ನಿರೀಕ್ಷಕ ಸಂತೋಷ ಕಶ್ಯಪ್ ರವರ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಗುವುದು. ಇದಕ್ಕೂ ಮಿತಿಮೀರಿ ಅವರು ಮಧ್ಯ ಮಾರಾಟ ಮಾಡಿದರೆ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಈರಮ್ಮ, ದಾಸಮ್ಮ, ಕೆಂಪಮ್ಮ, ಮಾದಮ್ಮ, ಬೋಮ್ಮಮ್ಮ, ಬಸಮ್ಮ, ದುಂಡಮ್ಮ, ಪುಟ್ಟಮ್ಮ ಇನ್ನಿತರರು ಹಾಜರಿದ್ದರು.
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…