ಜಿಲ್ಲೆಗಳು

ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಮಹಿಳೆಯರಿಂದ ಮನವಿ

ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು.

ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳಿದ್ದು, ಎಲ್ಲರೂ ಸಹ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ಮಧ್ಯೆ ಗ್ರಾಮದಲ್ಲಿ ಮೂವರು ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದರಿಂದ ಕುಡಿತಕ್ಕೆ ದಾಸರಾಗಿದ್ದಾರೆ. ಕೂಲಿ ಹಣವನ್ನೇಲ್ಲ ಕುಡಿತಕ್ಕೆ ವ್ಯಹಿಸುತ್ತಿದ್ದಾರೆ. ಇದರಿಂದ ಸಂಸಾರದಲ್ಲಿ ಗಲಭೆ ಜರುಗುತ್ತಿದ್ದು ಇದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದೆ.ಜೊತೆಗೆ ಯುವಕರು ಸಹ ಮಧ್ಯದ ದಾಸರಾಗುತ್ತಿದ್ದಾರೆ. ಮದ್ಯ ಮಾರಾಟವನ್ನು ನಿಷೇಧಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಆದ್ದರಿಂದ ಈ ಬಗ್ಗೆ ಇನ್ನಾದರೂ ಕ್ರಮ ಕೈಗೊಂಡು ಗ್ರಾಮದಲ್ಲಿ ಮಧ್ಯ ಮಾರಾಟವನ್ನು ನಿಲ್ಲಿಸಿ ಎಂದು ಮಹಿಳೆಯರು ಒತ್ತಾಯಿಸಿದರು.

ಎಎಸ್ಐ ರವಿಕುಮಾರ್ ಮಾತನಾಡಿ ವೃತ ನಿರೀಕ್ಷಕ ಸಂತೋಷ ಕಶ್ಯಪ್ ರವರ ಗಮನಕ್ಕೆ ತಂದು ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಗುವುದು. ಇದಕ್ಕೂ ಮಿತಿಮೀರಿ ಅವರು ಮಧ್ಯ ಮಾರಾಟ ಮಾಡಿದರೆ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ದಾಸಮ್ಮ, ಕೆಂಪಮ್ಮ, ಮಾದಮ್ಮ, ಬೋಮ್ಮಮ್ಮ, ಬಸಮ್ಮ, ದುಂಡಮ್ಮ, ಪುಟ್ಟಮ್ಮ ಇನ್ನಿತರರು ಹಾಜರಿದ್ದರು.

andolanait

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

19 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago