ಜಿಲ್ಲೆಗಳು

ಡೋಲಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಹೊತ್ತೊಯ್ದ ಜನ…

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ.

ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳದಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ ಮುಖಾಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಗುರುವಾರ ಮಧ್ಯಾಹ್ನ ತೀವ್ರ ಅಸ್ವಸ್ಥರಾದ ಕಾರಣ ಡೋಲಿಯಲ್ಲಿಯೇ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ವಾತಂತ್ರ್ಯ ಬಂದು 75 ವರ್ಷಗಳೆ ಕಳೆದರು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪ್ರಾಧಿಕಾರದವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಕಾಡಂಚಿನ ಗ್ರಾಮಗಳ ರಸ್ತೆ ತಲೆಗೆಟ್ಟಿರುವುದರಿಂದ 108 ತುರ್ತು ವಾಹನ ತೆರಳಲು ಸಾಧ್ಯವಾಗುತ್ತಿಲ್ಲ ಇದರಿಂದ ಇಲ್ಲಿಯ ರೋಗಿಗಳು ನರಕ ಅನುಭವಿಸುವಂತಾಗಿದೆ. ಗರ್ಭಿಣಿಯರನ್ನು ಆಸ್ಪತ್ರೆಗೆ ಡೋಲಿಯಲ್ಲಿ ಕರೆ ತರುವ ವೇಳೆ ಮಾರ್ಗ ಮಧ್ಯದಲ್ಲಿಯೇ ಹೆರಿಗೆಯೂ ಆಗಿದೆ. ಕೆಲವರು ಮಾರ್ಗ ಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಇಷ್ಟಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೊಡ್ಡಣೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಆಶ್ರಯವಾಗಿದ್ದ ಜನವನ : ಈ ಹಿಂದೆ ಮೆಂದಾರೆ,ತುಳಸಿಕೆರೆ, ಇಂಡಿಗನತ್ತ, ಪಡಸಲನತ್ತ, ಮೆದಗನಾಣೆ, ಪಾಲಾರ್, ದೊಡ್ಡಣೆ, ತೊಕೆರೆ, ಕೊಕ್ಕಬರೆ ಗ್ರಾಮಗಳಿಗೆ 3 ಜನ ವನ ವಾಹನ ಬಿಡಲಾಗಿತ್ತು. ಇದೀಗ ಕಳೆದ ಎರಡು ತಿಂಗಳಿನಿಂದ ರಸ್ತೆ ಹದಗೆಟ್ಟಿರುವುದರಿಂದ ಹಾಗೂ ಚಾಲಕರಿಗೆ ಸಂಬಳ ನೀಡದೆ ಇರುವುದರಿಂದ ವಾಹನ ನಿಲುಗಡೆಯಾಗಿದೆ. ಇಂಡಿಗನತ್ತ ಗ್ರಾಮದ ರಸ್ತೆಯನ್ನು ದುರಸ್ತಿ ಪಡಿಸಲಾಗುತ್ತಿದೆ ಅರಣ್ಯ ಇಲಾಖೆಯವರು ಚಾಲಕನನ್ನು ನೇಮಕ ಮಾಡಿದರೆ ಈ ಮಾರ್ಗವಾಗಿ ಜನಮನ ವಾಹನ ಪ್ರಾರಂಭ ಮಾಡುತ್ತೇವೆ ಎಂದು ಇಡಿಸಿ ಅಧ್ಯಕ್ಷ ತೊಳಸಿಕೆರೆ ಕೆಂಪ್ಪಣ್ಣ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.


ಹಿಂದಿನ ಡಿ ಎಫ್ಒ ರವರು ಕಾಡಂಚಿನ ಗ್ರಾಮಗಳ ಜನರ ಅನುಕೂಲಕ್ಕಾಗಿ ಜನವನ ವಾಹನವನ್ನು ಬಿಟ್ಟಿದ್ದರು. ಇದೀಗ ಅರಣ್ಯ ಇಲಾಖೆಯವರು ಜನವನ ವಾಹನವನ್ನು ನಿಲ್ಲಿಸಿರುವುದರಿಂದ ತೀವ್ರ ತೊಂದರೆ ಆಗಿದೆ. ಜನಪ್ರತಿನಿಧಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ, ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು.

ಕುಮಾರ್
ಮಹಾದೇವರ ಮಗ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago