ಜಿಲ್ಲೆಗಳು

ಮಾದಿಗ ಹೋರಾಟಗಾರರ ಮೇಲಿನ ಮೊಕದ್ದಮೆ ಕೈಬಿಡಿ

ಸುದ್ದಿಗೋಷ್ಠಿ ಮುಖಂಡ ಶಿವಮೂರ್ತಿ ಆಗ್ರಹ

ಚಾಮರಾಜನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾದಿಗ ಸಮುದಾಯದ ಪ್ರತಿಭಾಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಖಂಡನೀಯ. ಅಲ್ಲದೆ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಡಾ ಬಾಬು ಜಗಜೀವನ್ ರಾಮ್ ಯುವ ಜಾಗೃತಿ ವೇದಿಕೆ ಆಗ್ರಹಿಸಿದೆ.
ಡಿ.೧೧ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಾದಿಗ ಸಂಘಟನೆಗಳ ವತಿಯಿಂದ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಸಂಘಟನೆಗಳ ಮುಖಂಡರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ದೂರಿದರು.
ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಪರ ಆಗಮಿಸಿದ್ದ ಸಚಿವರಾದ ಸೋಮಣ್ಣ ಅವರು ಮನವಿ ಸ್ವೀಕರಿಸಲು ಮುಂದಾದರು. ಆದರೆ, ಪ್ರತಿಭಟನಾಕಾರರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವುದಾಗಿ ಪಟ್ಟು ಹಿಡಿದ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ತಳ್ಳಾಟ ನೂಕಾಟ ಶುರುವಾಯಿತು. ಆದರೂ ಪೊಲೀಸÀರು ಸಚಿವರನ್ನು ಪ್ರತಿಭಟನಾ ಸ್ಥಳದ ವೇದಿಕೆಗೆ ಕರೆದೊಯ್ಯಲು ಪ್ರಯತ್ನಪಟ್ಟರು. ಇದನ್ನು ವಿರೋಧಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಸರಿಯಲ್ಲ ಎಂದು ಖಂಡಿಸಿದರು.
ಈ ಘಟನೆಯಲ್ಲಿ ಹೋರಾಟಗಾರ ಕರಿಯಪ್ಪ ಗುಡಿಮನಿ ಎಂಬುವವರ ತಲೆಗೆ ಬಲವಾದ ಪೆಟ್ಟುಬಿತ್ತು. ಅನೇಕರಿಗೆ ಸಣ್ಣಮಟ್ಟ ಗಾಯಗಳಾಗಿವೆ. ಇದನ್ನ ಪ್ರಶ್ನಿಸಿದ ಹೋರಾಟಗಾರರಾದ ಅಂಬಣ್ಣ, ಆರೋಲಕ ಮತ್ತು ನೂರಾರು ಪ್ರತಿಭಟನಾಕಾರರನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ದೂರಿದರು.
ಹಿಂದುಳಿದ ಮಾದಿಗ ಸಮುದಾಯ ಒಳ ಮೀಸಲಾತಿ ಕೇಳುವುದು ನ್ಯಾಯಯುತವಾಗಿದೆ. ಈ ಹೋರಾಟ ಸಾಮಾಜಿಕ ನ್ಯಾಯ ಸಿಗುವವರೆಗೂ ನಡೆಯಲಿದೆ. ಡಿ.೧೯ ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಒಪ್ಪಿಗೆ ಪಡೆದು ಕೇಂದ್ರ ಸರ್ಕಾಕ್ಕೆ ಶಿಫಾರಸ್ಸು ಮಾಡಬೇಕು. ಸಂವಿಧಾನದ ಅನುಚ್ಛೇದ ೩೪೧ (೩) ತಿದ್ದುಪಡಿಯನ್ನು ತರಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ವೇದಿಕೆಯ ಮುಖಂಡರಾದ ಬಾಲರಾಜು, ನಿಟ್ರೆ ಮಹದೇವು, ಸೋಮಶೇಖರ್, ಮಹದೇವು, ರಾಜಣ್ಣ, ಗೋವಿಂದ್ ಹಾಜರಿದ್ದರು

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago