ಜಿಲ್ಲೆಗಳು

ಹನೂರು ವ್ಯಾಪ್ತಿಯ ಸಮಾಜಮುಖಿ ಕಾರ್ಯಗಳಿಗೆ ಸಿದ್ದಲಿಂಗಮಹಾಸ್ವಾಮಿ ಮೆಚ್ಚುಗೆ

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ ದಾಸೋಹ ಮಠ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ದಾಸೋಹ ಮತ್ತು ಕಾಯಕದ ಮೂಲಕ ಧಾರ್ಮಿಕ ಕ್ರಾಂತಿ ಮಾಡಿದವರು ಗುರುಮಲ್ಲೇಶ್ವರರು. ಈ ಭಾಗದಲ್ಲಿ ಅವರು ಹಾಕಿಕೊಟ್ಟ ಗುರು ಪರಂಪರೆಯ ಮಠಗಳನ್ನು ನವೀಕರಣ ಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸ ಮಾಡುತ್ತಿರುವ ನಿಶಾಂತ್ ರವರ ಸೇವೆಯನ್ನು ತಾವೆಲ್ಲರೂ ಬಳಸಿಕೊಳ್ಳುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದರು.

ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಅಭಿವೃದ್ದಿ ಕಾರ್ಯದಲ್ಲಿ ತೊಡಗಿಸಿಕೊಂಡು ಅತ್ಯಂತ ಕಡಿಮೆ ಅವಧಿಯಲ್ಲೇ ಜನಪ್ರಿಯತೆ ಗಳಿಸಿರುವ ನಿಶಾಂತ್ ಅವರು ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇವೆ ನೀಡದೆ, ಕ್ಷೇತ್ರದ ಇತರೆ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಅವರ ಸೇವೆಯನ್ನು ಪಡೆದ ನಾವೆಲ್ಲರೂ ಮುಂದಿನ ದಿನಗಳಲ್ಲಿ ನಿಶಾಂತ್ ರವರನ್ನು ಬೆಂಬಿಲಿಸಬೇಕು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಭೆಯಲ್ಲಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗಮಹಾಸ್ವಾಮಿ, ದೇವನೂರು ಮಠದ ಮಹಾಂತಸ್ವಾಮಿ, ಹೊಂದರಬಾಳು ಮಠದ ನೀಲಕಂಠ ಸ್ವಾಮಿ, ಆಲಹಳ್ಳಿ ಮಠದ ಶಿವಕುಮಾರ ಸ್ವಾಮಿಗಳು ದಿವ್ಯ ಸಾನಿದ್ಯವಹಿಸಿದ್ದರು. ಬಿಜೆಪಿ ಮುಖಂಡ ನಿಶಾಂತ್, ಕೊಳ್ಳೇಗಾಲ ತಾಲ್ಲೂಕು ವೀರಶೈವ ಸಂಘದ ಅಧ್ಯಕ್ಷ ಮಹದೇವ ಪ್ರಸಾದ್, ಪಾಳ್ಯ ಗ್ರಾಮದ ಯಜಮಾನರು, ಯುವಕರು ಮತ್ತು ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

6 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

25 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago