ಜಿಲ್ಲೆಗಳು

ಹನೂರು ವ್ಯಾಪ್ತಿಯ ಸಮಾಜಮುಖಿ ಕಾರ್ಯಗಳಿಗೆ ಸಿದ್ದಲಿಂಗಮಹಾಸ್ವಾಮಿ ಮೆಚ್ಚುಗೆ

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ ದಾಸೋಹ ಮಠ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ದಾಸೋಹ ಮತ್ತು ಕಾಯಕದ ಮೂಲಕ ಧಾರ್ಮಿಕ ಕ್ರಾಂತಿ ಮಾಡಿದವರು ಗುರುಮಲ್ಲೇಶ್ವರರು. ಈ ಭಾಗದಲ್ಲಿ ಅವರು ಹಾಕಿಕೊಟ್ಟ ಗುರು ಪರಂಪರೆಯ ಮಠಗಳನ್ನು ನವೀಕರಣ ಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸ ಮಾಡುತ್ತಿರುವ ನಿಶಾಂತ್ ರವರ ಸೇವೆಯನ್ನು ತಾವೆಲ್ಲರೂ ಬಳಸಿಕೊಳ್ಳುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದರು.

ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಅಭಿವೃದ್ದಿ ಕಾರ್ಯದಲ್ಲಿ ತೊಡಗಿಸಿಕೊಂಡು ಅತ್ಯಂತ ಕಡಿಮೆ ಅವಧಿಯಲ್ಲೇ ಜನಪ್ರಿಯತೆ ಗಳಿಸಿರುವ ನಿಶಾಂತ್ ಅವರು ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇವೆ ನೀಡದೆ, ಕ್ಷೇತ್ರದ ಇತರೆ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಅವರ ಸೇವೆಯನ್ನು ಪಡೆದ ನಾವೆಲ್ಲರೂ ಮುಂದಿನ ದಿನಗಳಲ್ಲಿ ನಿಶಾಂತ್ ರವರನ್ನು ಬೆಂಬಿಲಿಸಬೇಕು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಭೆಯಲ್ಲಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗಮಹಾಸ್ವಾಮಿ, ದೇವನೂರು ಮಠದ ಮಹಾಂತಸ್ವಾಮಿ, ಹೊಂದರಬಾಳು ಮಠದ ನೀಲಕಂಠ ಸ್ವಾಮಿ, ಆಲಹಳ್ಳಿ ಮಠದ ಶಿವಕುಮಾರ ಸ್ವಾಮಿಗಳು ದಿವ್ಯ ಸಾನಿದ್ಯವಹಿಸಿದ್ದರು. ಬಿಜೆಪಿ ಮುಖಂಡ ನಿಶಾಂತ್, ಕೊಳ್ಳೇಗಾಲ ತಾಲ್ಲೂಕು ವೀರಶೈವ ಸಂಘದ ಅಧ್ಯಕ್ಷ ಮಹದೇವ ಪ್ರಸಾದ್, ಪಾಳ್ಯ ಗ್ರಾಮದ ಯಜಮಾನರು, ಯುವಕರು ಮತ್ತು ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

1 hour ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

4 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

6 hours ago