ಜಿಲ್ಲೆಗಳು

ಅಕ್ರಮ ಸಕ್ರಮ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಿ : ಶಾಸಕ ಆರ್ ನರೇಂದ್ರ

ಹನೂರು : ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕೆಂದು ಶಾಸಕ ಆರ್ ನರೇಂದ್ರ ತಹಸೀಲ್ದಾರ್ ಆನಂದಯ್ಯ ರವರಿಗೆ ಸೂಚಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರೆಯಲಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅಕ್ರಮ ಸಕ್ರಮದಡಿಯಲ್ಲಿ ಇದುವರೆಗೆ 3998 ಅರ್ಜಿಗಳು ಸಲ್ಲಿಕೆಯಾಗಿದ್ದು,311ಅರ್ಜಿಗಳು ತಿರಸ್ಕಾರಗೊಂಡಿದೆ.ಉಳಿಕೆ 3687 ಅರ್ಜಿಗಳನ್ನು ಸರ್ವೆ ಮಾಡಿಸಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಶೀಘ್ರದಲ್ಲಿ ವಿಲೇವಾರಿ ಮಾಡಿ ಅರ್ಹ ಫಲಾನುಭವಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ತಿಳಿಸಿದರು.

ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಣ್ಣ ನಗರ ಗ್ರಾಮದಲ್ಲಿ ರೈತರಿಗೆ ನೀಡಲಾಗಿದ್ದ ಸರ್ವೆ ನಂಬರ್ ಬದಲಾಗಿ ಇತರೆ ಸರ್ವೇ ನಂಬರ್ ನಲ್ಲಿ ಅನುಭವ ಇರುವುದರಿಂದ ತೊಂದರೆಯಾಗಿತ್ತು.ಇದಲ್ಲದೆ ಹೂಗ್ಯಂ ಗ್ರಾಮದಲ್ಲಿನ 2 ಸಾವಿರ ಎಕರೆ ಪೈಕಿ ಇನ್ 211 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. ಇಲ್ಲಿಯೂ ಸಹ ಮುಂಜೂರಾಗಿರುವ ನಿವೇಶನ ಬದಲು ಇತರೆ ಸರ್ವೇ ನಂಬರ್ ನಲ್ಲಿ ಅನುಭವ ಇರುವುದರಿಂದ ಇದೂ ಸಹ ತಿದ್ದುಪಡಿ ಮಾಡಿ ಅನುಭವದಲ್ಲಿರುವವರೆಗೆ ಆರ್ ಟಿಸಿ ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೊಸ ಕಂದಾಯ ಗ್ರಾಮಗಳಾಗಿ ಪರಿವರ್ತನೆ : ತಾಲ್ಲೂಕಿನ ನಾಗಣ್ಣನಗರ, ಕೆಂಪಯ್ಯನಟ್ಟಿ, ಭೈರನತ್ತ,ನಾಗನತ್ತ ದೊಡ್ಡಮಾಲಾಪುರ, ಚೆನ್ನೂರು,ಮಂಚಾಪುರ, ವಡ್ಡರದೊಡ್ಡಿ, ಹೊಸಳ್ಳಿ, ಕೆ ಗುಂಡಾಪುರ, ಮಂಚಾಪುರ, ಬಿ ಗುಂಡಾಪುರ, ವಡ್ಡರದೊಡ್ಡಿ, ನಾಲ್ ರೋಡ್, ಮಲ್ಲಯನಪುರ ಚಂಗದಾರಹಳ್ಳಿ ಅಂಡೆ ಕುರುಬರದೊಡ್ಡಿ, ಬೋರೆದೊಡ್ಡಿ, ಕೂಡ್ಲೂರು, ನೆಲ್ಲೂರು, ಮಾರಳ್ಳಿ ಗ್ರಾಮಗಳನ್ನು ಹೊಸ ಕಂದಾಯ ಗ್ರಾಮವನ್ನಾಗಿ ಮಾಡಲು ಈಗಾಗಲೇ ಸೂಚನೆ ಹೊರಡಿಸಲಾಗಿದೆ ಎಂದು ತಹಸೀಲ್ದಾರ್ ಆನಂದಯ್ಯ ತಿಳಿಸಿದರು.

ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಕಲ್ಪಿಸಿ: ತಾಲ್ಲೂಕಿನ ವಿವಿಧ ಗ್ರಾಮಗಳಾದ ಆರ್ ಎಸ್ ದೊಡ್ಡಿ, ದೊಡ್ಡಾಣೆ, ಕೊಕ್ಕಬರೆ, ತೋಕೆರೆ,, ವಡ್ಡರದೊಡ್ಡಿ, ಹುತ್ತೂರು, ಅಂಬಿಕಾಪುರ, ನಾಗಣ್ಣನಗರ,, ಪುದುರಾಮಾಪುರ,, ದೊಮ್ಮನಗದ್ದೆ, ಸತ್ತಿಮಂಗಲ, ಅರ್ಜುನ ದೊಡ್ಡಿ, ಗೊಲ್ಲರದಿಂಬ, ಕೆ ಗುಂಡಾಪುರ ಮಾರಳ್ಳಿ, ಮಂಚಾಪುರ, ಪಚ್ಚೆದೊಡ್ಡಿ, ಬಿ ಜಿ ದೊಡ್ಡಿ ವಿಎಸ್ ದೊಡ್ಡಿ, ಮಾವತ್ತೂರು, ಉದ್ದಟ್ಟಿ, ಜೀರಿಗೆಗದ್ದೆ ಗ್ರಾಮಗಳಲ್ಲಿ ಸ್ಮಶಾನ ಇಲ್ಲದಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಗಳಿಂದ ವರದಿ ಪಡೆಯಲಾಗಿದ್ದು ಸರ್ಕಾರಿ ಜಮೀನು ಇರುವ ಕಡೆ ನಿವೇಶನ ಗುರುತಿಸಲಾಗಿದೆ.ತಕ್ಷಣ ಸ್ಮಶಾನ ಇಲ್ಲದಿರುವ ಗ್ರಾಮಗಳಿಗೆ ಸ್ಮಶಾನ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಇಲ್ಲ : ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ 4ವರ್ಷಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲ,ಮೋಟಾರ್ ದುರಸ್ತಿಗೊಂಡರೆ ತಕ್ಷಣವೇ ಪಿಡಿಒಗಳು ಕ್ರಮಕೈಗೊಳ್ಳಬೇಕು ಎಂದು ಇಒ ಶ್ರೀನಿವಾಸ್ ರವರಿಗೆ ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಆನಂದಯ್ಯ,ಗ್ರೇಡ್-2 ತಹಸೀಲ್ದಾರ್ ಧನಂಜಯ, ಉಪ ತಹಸೀಲ್ದಾರ್ ಗಳಾದ ಉಮಾ, ಸುರೇಖಾ, ಕಂದಾಯ ನಿರೀಕ್ಷಕರು ಗಳಾದ ಮಹದೇವಸ್ವಾಮಿ, ಬಿ ಪಿ ಮಾದೇಶ್, ಶಿವಕುಮಾರ್ ಗ್ರಾಮ ಲೆಕ್ಕಿಗರುಗಳಾದ ಶೇಷಣ್ಣ, ರಾಜು, ವಿನೋದ್, ಮಹದೇವ್ ಪ್ರಸಾದ್,ಕಾರ್ತಿಕ್,ಪುನೀತ್,ಮಾರುತಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

39 mins ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

1 hour ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

3 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

3 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

4 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

5 hours ago