ಜಿಲ್ಲೆಗಳು

ಚಾ.ನಗರ : ಹಿಂದಿ ಹೇರಿಕೆ ಯತ್ನ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕೇಂದ್ರ ಇಬ್ಬಾಗ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ದೇಶದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಹಿಂದಿ ರಾಷ್ಟçಭಾಷೆಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಾಗೂ ಸರ್ವಸ್ವವಾಗಿದೆ. ಇದೆಲ್ಲ ಗೊತ್ತಿದ್ದರೂ ಕೇಂದ್ರ ಸರ್ಕಾರ ಬಲವಂತವಾಗಿ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಯತ್ನಿಸುವುದು ಸರಿಯಲ್ಲ ಎಂದು ಖಂಡಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರಾದ ಶಾ.ಮುರಳಿ, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ಚಾ.ರಾ.ಕುಮಾರ್, ಚಾ.ಸಿ.ಸಿದ್ದರಾಜು, ಕಾರ್ತಿಕ್, ಯರಿಯೂರು ರಾಜಣ್ಣ, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ದೊರೆ ಇತರರಿದ್ದರು.

andolanait

Recent Posts

ಮಾರ್ಯಾದಾಗೇಡು ಹತ್ಯೆ ತಡೆಗೆ ವಿಶೇಷ ಕಾನೂನು : ಸಿಎಂ ಅಧಿಕೃತ ಘೋಷಣೆ

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾಗೇಡು ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ…

8 hours ago

ಕೇರಳಕ್ಕೆ ಸಾಗಿಸುತ್ತಿದ್ದ ರಕ್ತಚಂದನ ವಶ ; ಮೂವರ ಬಂಧನ

ಕೊಳ್ಳೇಗಾಲ : ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 101 ಕೆಜಿ ತೂಕದ 8 ರಕ್ತಚಂದನ ತುಂಡುಗಳನ್ನು ಅರಣ್ಯ ಸಂಚಾರ ದಳದವರು ವಶಪಡಿಸಿಕೊಂಡಿದ್ದಾರೆ.…

8 hours ago

ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11 ಲಕ್ಷ ವಂಚನೆ

ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯನಗರದ ನಿವಾಸಿ, ಖಾಸಗಿ…

9 hours ago

ಜ.9ರಿಂದ ಮೈಸೂರಲ್ಲಿ ʻದೇಸಿ ಎಣ್ಣೆ ಮೇಳʼ

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ…

10 hours ago

ಟ್ರಂಪ್‌ ನಡೆಗೆ ಖಂಡನೆ ; ವೆನೆಜುವೆಲಾ ಅಧ್ಯಕ್ಷರ ಬಿಡುಗಡೆಗೆ ಆಗ್ರಹ

ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ)…

10 hours ago

ಮೈಸೂರು | ವಸ್ತುಪ್ರದರ್ಶನದಲ್ಲಿ ಡ್ರಾಗನ್‌ ಬೋಟಿಂಗ್‌

ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ…

10 hours ago