ಜಿಲ್ಲೆಗಳು

ಚಾ.ನಗರ : ಹಿಂದಿ ಹೇರಿಕೆ ಯತ್ನ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕೇಂದ್ರ ಇಬ್ಬಾಗ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ದೇಶದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಹಿಂದಿ ರಾಷ್ಟçಭಾಷೆಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಾಗೂ ಸರ್ವಸ್ವವಾಗಿದೆ. ಇದೆಲ್ಲ ಗೊತ್ತಿದ್ದರೂ ಕೇಂದ್ರ ಸರ್ಕಾರ ಬಲವಂತವಾಗಿ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಯತ್ನಿಸುವುದು ಸರಿಯಲ್ಲ ಎಂದು ಖಂಡಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರಾದ ಶಾ.ಮುರಳಿ, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ಚಾ.ರಾ.ಕುಮಾರ್, ಚಾ.ಸಿ.ಸಿದ್ದರಾಜು, ಕಾರ್ತಿಕ್, ಯರಿಯೂರು ರಾಜಣ್ಣ, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ದೊರೆ ಇತರರಿದ್ದರು.

andolanait

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago