ಜಿಲ್ಲೆಗಳು

ಜೀವಂತ ನಕ್ಷತ್ರ ಆಮೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು ಉತ್ತರ ಚುಕ್ಕಬಿದರಕಲ್ಲು ಗ್ರಾಮದ ರವಿ(47) ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ, ವಾಜರಹಳ್ಳಿ ಗ್ರಾಮದ ಲಕ್ಷ್ಮೀ ತಲೆ ಮರೆಸಿಕೊಂಡಿದ್ದಾರೆ. ಆರೋಪಿ ಬಳಿಯಿದ್ದ ನಾಲ್ಕು ನಕ್ಷತ್ರ ಆಮೆಗಳು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡಲು ನಾಲ್ಕು ಜೀವಂತ ನಕ್ಷತ್ರ ಆಮೆಗಳನ್ನು ಕಳ್ಳಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವುದರ ಖಚಿತ ಮಾಹಿತಿ ಇಲ್ಲಿನ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಹಾಗೂ ಅವರ ಸಿಬ್ಬಂದಿಗಳು ಜೊತೆ ತಾತ್ಕಾಲಿಕ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಅರಣ್ಯ ಸಂಚಾರಿ ದಳದ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಗಳನ್ನು ನ್ಯಾಯಾಂಗದ ಮುಂದೆ ಹಾಜರು ಪಡಿಸಲಾಯಿತು.

ದಾಳಿಯಲ್ಲಿ ಅರಣ್ಯ ಸಂಚಾರಿ ದಳದ ಮುಖ್ಯ ಪೇದೆಗಳಾದ ತಖೀಉಲ್ಲಾ, ಬಸವರಾಜು, ಸ್ವಾಮಿ, ರಾಮಚಂದ್ರ, ಶಂಕರ, ಚಾಲಕ ಪ್ರಭಾಕರ ಇದ್ದರು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago