ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಗುಂಡಿಯೊಂದಕ್ಕೆ ಇಳಿದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ. ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗ, ಕಂಡಕ್ಟರ್ ಗೆ ಬೆನ್ಜು ಮತ್ತು ಹೊಟ್ಟೆ ಹಾಗೂ ಇಬ್ಬರು ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾದ ಪರಿಣಾಮ ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ.
KA:57 F:866 ಸಂಖ್ಯೆಯ ಈ ಬಸ್ ಮದ್ದೂರು ಘಟಕದ್ದಾಗಿದ್ದು 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…