ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಗುಂಡಿಯೊಂದಕ್ಕೆ ಇಳಿದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ. ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗ, ಕಂಡಕ್ಟರ್ ಗೆ ಬೆನ್ಜು ಮತ್ತು ಹೊಟ್ಟೆ ಹಾಗೂ ಇಬ್ಬರು ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾದ ಪರಿಣಾಮ ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ.
KA:57 F:866 ಸಂಖ್ಯೆಯ ಈ ಬಸ್ ಮದ್ದೂರು ಘಟಕದ್ದಾಗಿದ್ದು 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…