ಜಿಲ್ಲೆಗಳು

ಚಾ.ನಗರ : ಬಿಳಿಗಿರಿ ಬನದಲ್ಲಿ ಕುಬ್ಜ ಹಲ್ಲಿಗಳು ಪತ್ತೆ

ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಹಲ್ಲಿ ಪ್ರಭೇದವನ್ನು ಪತ್ತೆ ಹಚ್ಚಲಾಗಿದೆ.
ಬಿಳಿಗಿರಿರಂಗ ಬೆಟ್ಟದಲ್ಲಿರುವ ಏಟ್ರೀ (ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಇಕಾಲಜಿ ಅಂಡ್ ದಿ ಎನ್ವಿರಾನ್ಮೆಂಟ್) ಸಂಶೋಧಕ ಡಾ. ಎನ್.ಎ.ಅರವಿಂದ್ ಮತ್ತು ಸಂಶೋಧನಾ ವಿದ್ಯಾರ್ಥಿ ಸೂರ್ಯನಾರಾಯಣನ್ ಈ ಹೊಸ ಹಲ್ಲಿ ಪ್ರಭೇದ ಪತ್ತೆ ಹಚ್ಚಿದ್ದಾರೆ‌. ಅಧ್ಯಯನ ನಡೆಸಿ ಅದನ್ನು ‘ಕುಬ್ಜ ಹಲ್ಲಿ’ ಎಂದು ಗುರುತಿಸಿದ್ದಾರೆ.
ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಹೆಣ್ಣು ಹಲ್ಲಿಯು ಪೂರ್ತಿಯಾಗಿ ಕಂದು ಬಣ್ಣದಿಂದ ಕೂಡಿದೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಉಮಾಶಂಕರ್ ಅವರ ಹೆಸರನ್ನು ಹಲ್ಲಿ ಪ್ರಬೇಧಕ್ಕೆ ಸೇರಿಸಿದ್ದು, ಉಮಾಶಂಕರ್ ಕುಬ್ಜ ಹಲ್ಲಿ (Umashankar’s dwarf gecko) ಎಂದು ಕರೆಯಲಾಗಿದೆ.
ಇನ್ನು ಹೊಸದಾಗಿ ಪತ್ತೆಯಾಗಿರುವ ಪ್ರಬೇಧವು ರಾತ್ರಿ ಹೊತ್ತು ಹೆಚ್ಚು ಕಾಣಲಿದ್ದು ಕಲ್ಲು, ಬಂಡೆಗಳ ಸಂದಿಗಳು ಇವುಗಳ ಅವಾಸಸ್ಥಾನ ಆಗಲಿದೆ. ಎರಡಕ್ಕಿಂತ ಹೆಚ್ಚು ಹಲ್ಲಿಗಳು ಒಂದೇ ಕಡೆ ಮೊಟ್ಟೆ ಇಡಲಿದ್ದು, ಈ ಹಲ್ಲಿಯೂ ಕುಬ್ಜ ಗಾತ್ರದ್ದಾಗಿದೆ, ಬಿಳಿಗಿರಿಬನದಲ್ಲಿ ಮಾತ್ರ ಈ ಹಲ್ಲಿ ಕಂಡುಬರಲಿದೆ ಎಂದು ಅಧ್ಯಯನದಿಂದ ಸ್ಪಷ್ಟವಾಗಿದೆ.

andolanait

Recent Posts

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

14 mins ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

42 mins ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

48 mins ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

1 hour ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

1 hour ago

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…

1 hour ago