ಜಿಲ್ಲೆಗಳು

ಚಾ.ನಗರ : ಬಿಳಿಗಿರಿ ಬನದಲ್ಲಿ ಕುಬ್ಜ ಹಲ್ಲಿಗಳು ಪತ್ತೆ

ಚಾಮರಾಜನಗರ : ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕುಬ್ಜ ಹಲ್ಲಿಗಳು ಪತ್ತೆಯಾಗಿವೆ. ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನನಾಥ ಸ್ವಾಮಿ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಹಲ್ಲಿ ಪ್ರಭೇದವನ್ನು ಪತ್ತೆ ಹಚ್ಚಲಾಗಿದೆ.
ಬಿಳಿಗಿರಿರಂಗ ಬೆಟ್ಟದಲ್ಲಿರುವ ಏಟ್ರೀ (ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಇಕಾಲಜಿ ಅಂಡ್ ದಿ ಎನ್ವಿರಾನ್ಮೆಂಟ್) ಸಂಶೋಧಕ ಡಾ. ಎನ್.ಎ.ಅರವಿಂದ್ ಮತ್ತು ಸಂಶೋಧನಾ ವಿದ್ಯಾರ್ಥಿ ಸೂರ್ಯನಾರಾಯಣನ್ ಈ ಹೊಸ ಹಲ್ಲಿ ಪ್ರಭೇದ ಪತ್ತೆ ಹಚ್ಚಿದ್ದಾರೆ‌. ಅಧ್ಯಯನ ನಡೆಸಿ ಅದನ್ನು ‘ಕುಬ್ಜ ಹಲ್ಲಿ’ ಎಂದು ಗುರುತಿಸಿದ್ದಾರೆ.
ಪತ್ತೆಯಾದ ಹಲ್ಲಿಯು 2.57 CM ನಷ್ಟು ಉದ್ದವಿದ್ದು, ಗಂಡು ಹಲ್ಲಿಯ ದೇಹ ಕಂದು ಬಣ್ಣದಿಂದಿದ್ದು ಬಾಲ ಕಪ್ಪಾಗಿದೆ. ಹೆಣ್ಣು ಹಲ್ಲಿಯು ಪೂರ್ತಿಯಾಗಿ ಕಂದು ಬಣ್ಣದಿಂದ ಕೂಡಿದೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಉಮಾಶಂಕರ್ ಅವರ ಹೆಸರನ್ನು ಹಲ್ಲಿ ಪ್ರಬೇಧಕ್ಕೆ ಸೇರಿಸಿದ್ದು, ಉಮಾಶಂಕರ್ ಕುಬ್ಜ ಹಲ್ಲಿ (Umashankar’s dwarf gecko) ಎಂದು ಕರೆಯಲಾಗಿದೆ.
ಇನ್ನು ಹೊಸದಾಗಿ ಪತ್ತೆಯಾಗಿರುವ ಪ್ರಬೇಧವು ರಾತ್ರಿ ಹೊತ್ತು ಹೆಚ್ಚು ಕಾಣಲಿದ್ದು ಕಲ್ಲು, ಬಂಡೆಗಳ ಸಂದಿಗಳು ಇವುಗಳ ಅವಾಸಸ್ಥಾನ ಆಗಲಿದೆ. ಎರಡಕ್ಕಿಂತ ಹೆಚ್ಚು ಹಲ್ಲಿಗಳು ಒಂದೇ ಕಡೆ ಮೊಟ್ಟೆ ಇಡಲಿದ್ದು, ಈ ಹಲ್ಲಿಯೂ ಕುಬ್ಜ ಗಾತ್ರದ್ದಾಗಿದೆ, ಬಿಳಿಗಿರಿಬನದಲ್ಲಿ ಮಾತ್ರ ಈ ಹಲ್ಲಿ ಕಂಡುಬರಲಿದೆ ಎಂದು ಅಧ್ಯಯನದಿಂದ ಸ್ಪಷ್ಟವಾಗಿದೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago