ಜಿಲ್ಲೆಗಳು

ಚಾ.ನಗರ : ಲೋಕ ಅದಾಲತ್‌ನಲ್ಲಿ 10920 ಪ್ರಕರಣಗಳು ಇತ್ಯರ್ಥ

ಸುದ್ದಿಗೋಷ್ಠಿಯಲ್ಲಿ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಮಾಹಿತಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಜಿಲ್ಲಾದ್ಯಂತ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೦೯೨೦ ವಿವಿಧ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ತಿಳಿಸಿದರು.
ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ನ್ಯಾಯಾಲಯಗಳಲ್ಲಿ ಭಾನುವಾರ ಅದಾಲತ್ ನಡೆಯಿತು. ಸಾಕಷ್ಟು ಮೊಕದ್ದಮೆಗಳು ಇತ್ಯರ್ಥವಾದವು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ನ್ಯಾಯಾಲಯದಲ್ಲಿ ಬಾಕಿಯಿದ್ದ ೧೮೯೦ ಮತ್ತು ವ್ಯಾಜ್ಯ ಪೂರ್ವ ೯೦೩೦ ಪ್ರಕರಣಗಳು ಸೇರಿದಂತೆ ಒಟ್ಟು ೧೦೯೨೦ ಅನ್ನು ದೂರುದಾರರ ಒಪ್ಪಿಗೆಯಂತೆ ರಾಜೀ ಸಂಧಾನದ ಮೂಲಕ ಬಗೆಹರಿಸಲಾಯಿತು. ೧೮೯೦ ಪ್ರಕರಣಗಳಲ್ಲಿ ೩,೯೯,೪೬,೮೬೧ ರೂ. ಮತ್ತು ೯೦೩೦ ಕೇಸ್‌ಗಳಲ್ಲಿ ೧,೮೦,೬೯,೮೦೦ ರೂ. ಬಂದಿದೆ ಎಂದು ವಿವರಣೆ ನೀಡಿದರು.
ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳು ವಿಲೇವಾರಿ ಆಗಿದ್ದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಅಲ್ಲದೆ ನ್ಯಾಯಾಲಯಗಳ ಮೇಲಿನ ಕೇಸುಗಳ ಹೊರೆ ತಗ್ಗಿದೆ. ಇದು ಯಶಸ್ವಿಯಾಗಲು ನ್ಯಾಯಾಧೀಶರು, ವಕೀಲರು, ನ್ಯಾಯಾಲಯ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಮಾಧ್ಯಮದವರ ಸಹಕಾರ ನೀಡಿದ್ದಾರೆ ಎಂದು ಧನ್ಯವಾದ ತಿಳಿಸಿದರು.
ಗೋಷ್ಠಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಶ್ರೀಧರ್, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ವಿರೂಪಾಕ್ಷ ಹಾಜರಿದ್ದರು.

* ವಿಚ್ಛೇದನ ಬಯಸಿದ್ದರೂ ಒಂದಾದ ದಂಪತಿ

ಕಳೆದ ಒಂದು ವರ್ಷದ ಹಿಂದೆ ದಂಪತಿ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಒಬ್ಬರಿಗೊಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಒಂದಾಗಿ ಬಾಳುವುದು ಸಾಧ್ಯವೇ ಇಲ್ಲವೆಂದು ತೀರ್ಮಾನಿಸಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅದಾಲತ್‌ನಲ್ಲಿ ಆಪ್ತ ಸಮಾಲೋಚನೆ ನಡೆಸಿ ಇಬ್ಬರ ನಡುವೆ ರಾಜೀ ಸಂಧಾನ ಮಾಡಿಸಲಾಯಿತು. ದಂಪತಿ ಒಟ್ಟಾಗಿ ಬಾಳುವುದಾಗಿ ಒಪ್ಪಿಕೊಂಡು ಕೇಸ್ ಇತ್ಯರ್ಥ ಮಾಡಿಕೊಂಡರು.
೮ ವರ್ಷಗಳಷ್ಟು ಹಳೆಯದಾದ ಆಸ್ತಿಯಲ್ಲಿ ಪಾಲು ಹಂಚಿಕೆ ಮೊಕದ್ದಮೆಯು ೨೦೧೫ ರಲ್ಲಿ ನ್ಯಾಯಾಲಯಕ್ಕೆ ಬಂದಿತ್ತು. ತಂದೆಯ ಆಸ್ತಿಯಲ್ಲಿ ಅಣ್ಣ ತಮ್ಮಂದಿರAತೆ ನನಗೂ ಪಾಲು ಬೇಕೆಂದು ಕೋರಿ ತಂಗಿಯೊಬ್ಬಳು ಕೇಸ್ ದಾಖಲಿಸಿದ್ದರು. ಸಹೋದರರು, ಸಹೋದರಿಯರ ಮನವೊಲಿಸಿ ಸಂಧಾನ ಮೂಲಕ ಮುಗಿಸಲಾಯಿತು.
ಆಸ್ತಿಯನ್ನು ಕ್ರಯ ಮಾಡಲು ಒಪ್ಪಂದವಾಗಿ ೨೫ ಲಕ್ಷ ರೂ. ನೀಡಲಾಗಿತ್ತು. ಆದರೆ, ಆಸ್ತಿಯನ್ನು ಮಾರಾಟ ಮಾಡಲು ಮನಸ್ಸು ಮಾಡದ ಮಾಲೀಕರು ೨೫ ಲಕ್ಷ ರೂ.ವಾಪಸ್ ನೀಡಿ ಆಸ್ತಿಯನ್ನು ಮರಳಿ ಪಡೆದ ಪ್ರಕರಣವನ್ನು ಮುಕ್ತಾಯ ಮಾಡಲಾಯಿತು ಎಂದು ನ್ಯಾಯಾಧೀಶರು ತಿಳಿಸಿದರು.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

2 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

2 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

2 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

3 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

3 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

3 hours ago