ಜಿಲ್ಲೆಗಳು

ಚಾ. ನಗರ : ಮಾದಪ್ಪನನ್ನು ಕಾಣಲು ಬೆಟ್ಟದತ್ತ ಸಾಲು ಸಾಲು ಭಕ್ತರು

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ  ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ಅಮವಾಸ್ಯೆ, ಶಿವರಾತ್ರಿ,ಯುಗಾದಿ, ದೀಪಾವಳಿ ಸಂದರ್ಭಗಳಲ್ಲಿ ಕನಕಪುರ, ರಾಮನಗರ, ಪಾಂಡವಪುರ, ಮಂಡ್ಯ, ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಿಂದ  ಮಲೆ ಮಹದೇಶ್ವರ ಬೆಟ್ಟಕ್ಕೆ ಹರಕೆ ಹೊತ್ತ ಲಕ್ಷಾಂತರ ಭಕ್ತರು ನೂರಾರು ಕಿಲೋ ಮೀಟರ್ ಪಾದಯಾತ್ರೆಯ ಮೂಲಕ ಮಾದಪ್ಪನ ದರ್ಶನ ಪಡೆಯುತ್ತಾರೆ. ಅದರಂತೆ ಹನೂರು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಾದಪ್ಪನ ಭಕ್ತರು ಪಾದಯಾತ್ರೆಯನ್ನು ಮಾಡಿ ತಮ್ಮ ಹರಕೆ ತೀರಿಸಿದ್ದಾರೆ.
ಮಲೆಮಹದೇಶ್ವರ ಸ್ವಾಮಿಯ  ಸೇವಾ ಸಮಿತಿ ಅಧ್ಯಕ್ಷರಾದ ಗಂಗಾಧರ ಮಾತನಾಡಿ ನಾವು ಕಳೆದ 19 ವರ್ಷಗಳ ಹಿಂದೆ 20 ಮಂದಿ ಯ ಮೂಲಕ ಪಾದಯಾತ್ರೆ ಪ್ರಾರಂಭಿಸಲಾಯಿತು, ಇದೀಗ ಸುಮಾರು 2ಸಾವಿರಕ್ಕೂ ಹೆಚ್ಚು ಮಲೆಮಾದೇಶ್ವರ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.ಪಾದಯಾತ್ರೆಗೆ ಬರುವ ಭಕ್ತಾದಿಗಳಿಗೆ ನೂರಾರು ದಾನಿಗಳು ನೀಡಿರುವ ಆಹಾರ ಪದಾರ್ಥಗಳಿಂದ ಬೆಳಗಿನ ತಿಂಡಿ ಮಧ್ಯಾಹ್ನದ ಊಟ ವಿತರಣೆ ಮಾಡಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಹದೇಶ್ವರ ಸ್ವಾಮಿಯ ಭಕ್ತರು ಮಾದಪ್ಪನಿಗೆ “ಉಘೇ ಉಘೇ ಮಾದಪ್ಪ”ಎಂಬ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಗೆ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರುಗಳಾದ ನಾರಾಯಣ್, ಶಂಕರ್, ಶಶಿ, ನಾಗೇಂದ್ರ, ಶಿವಣ್ಣ,ನಾಗಣ್ಣ,ಜಡೇಸ್ವಾಮಿ ಸೇರಿದಂತೆ ನೂರಾರು ಸದಸ್ಯರುಗಳು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

2 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

2 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

5 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

5 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

5 hours ago