ಜಿಲ್ಲೆಗಳು

ಚಾ. ನಗರ : ಮಾದಪ್ಪನನ್ನು ಕಾಣಲು ಬೆಟ್ಟದತ್ತ ಸಾಲು ಸಾಲು ಭಕ್ತರು

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ  ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ಅಮವಾಸ್ಯೆ, ಶಿವರಾತ್ರಿ,ಯುಗಾದಿ, ದೀಪಾವಳಿ ಸಂದರ್ಭಗಳಲ್ಲಿ ಕನಕಪುರ, ರಾಮನಗರ, ಪಾಂಡವಪುರ, ಮಂಡ್ಯ, ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಿಂದ  ಮಲೆ ಮಹದೇಶ್ವರ ಬೆಟ್ಟಕ್ಕೆ ಹರಕೆ ಹೊತ್ತ ಲಕ್ಷಾಂತರ ಭಕ್ತರು ನೂರಾರು ಕಿಲೋ ಮೀಟರ್ ಪಾದಯಾತ್ರೆಯ ಮೂಲಕ ಮಾದಪ್ಪನ ದರ್ಶನ ಪಡೆಯುತ್ತಾರೆ. ಅದರಂತೆ ಹನೂರು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಾದಪ್ಪನ ಭಕ್ತರು ಪಾದಯಾತ್ರೆಯನ್ನು ಮಾಡಿ ತಮ್ಮ ಹರಕೆ ತೀರಿಸಿದ್ದಾರೆ.
ಮಲೆಮಹದೇಶ್ವರ ಸ್ವಾಮಿಯ  ಸೇವಾ ಸಮಿತಿ ಅಧ್ಯಕ್ಷರಾದ ಗಂಗಾಧರ ಮಾತನಾಡಿ ನಾವು ಕಳೆದ 19 ವರ್ಷಗಳ ಹಿಂದೆ 20 ಮಂದಿ ಯ ಮೂಲಕ ಪಾದಯಾತ್ರೆ ಪ್ರಾರಂಭಿಸಲಾಯಿತು, ಇದೀಗ ಸುಮಾರು 2ಸಾವಿರಕ್ಕೂ ಹೆಚ್ಚು ಮಲೆಮಾದೇಶ್ವರ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.ಪಾದಯಾತ್ರೆಗೆ ಬರುವ ಭಕ್ತಾದಿಗಳಿಗೆ ನೂರಾರು ದಾನಿಗಳು ನೀಡಿರುವ ಆಹಾರ ಪದಾರ್ಥಗಳಿಂದ ಬೆಳಗಿನ ತಿಂಡಿ ಮಧ್ಯಾಹ್ನದ ಊಟ ವಿತರಣೆ ಮಾಡಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಹದೇಶ್ವರ ಸ್ವಾಮಿಯ ಭಕ್ತರು ಮಾದಪ್ಪನಿಗೆ “ಉಘೇ ಉಘೇ ಮಾದಪ್ಪ”ಎಂಬ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಗೆ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರುಗಳಾದ ನಾರಾಯಣ್, ಶಂಕರ್, ಶಶಿ, ನಾಗೇಂದ್ರ, ಶಿವಣ್ಣ,ನಾಗಣ್ಣ,ಜಡೇಸ್ವಾಮಿ ಸೇರಿದಂತೆ ನೂರಾರು ಸದಸ್ಯರುಗಳು ಹಾಜರಿದ್ದರು.

andolanait

Recent Posts

ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ: ಕುಶಾಲನಗರ ಅಗ್ನಿಶಾಮಕ ಠಾಣೆ ಪ್ರಕಟಣೆ

ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…

4 mins ago

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌…

21 mins ago

ಚಾ.ನಗರ ಆಕ್ಸಿಜನ್‌ ದುರಂತ | ಸಂತ್ರಸ್ತರಿಗೆ ನೇಮಕ ಪತ್ರ ವಿತರಿಸಿದ ಸಿಎಂ

ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…

28 mins ago

ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ : ಸಿಎಂ

ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ…

1 hour ago

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…

3 hours ago

ಕೈಬೀಸಿ ಕರೆಯುತ್ತಿದೆ ಕುರಹಟ್ಟಿ ವಾಟರ್‌ಫಾಲ್ಸ್‌

ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್‌ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…

4 hours ago