ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಆಗಮಿಸಿದ ಭಕ್ತರು ಸಂಪ್ರದಾಯದಂತೆ ದೇಗುಲದ ಮುಂಭಾಗ ಧೂಪ ಹಾಕಿ ಅಂತರಗಂಗೆಯ ಬಳಿ ಪುಣ್ಯಸ್ನಾನ ಮಾಡಿದರು. ಬಳಿಕ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರಲ್ಲದೇ ಆಲಂಬಾಡಿ ಬಸವಮೂರ್ತಿಗೂ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನಗಳ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವವು ದೇಗುಲದ ಸುತ್ತಲೂ ಜರುಗಿತು. ಈ ವೇಳೆ ಭಕ್ತರು ‘ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಹಾಲಯ ಅಮವಾಸೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದ ರಾಜಗೋಪುರ, ಗರ್ಭಗುಡಿ ಗೋಪುರ,ಅಂತರಗಂಗೆ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ತಮಿಳುನಾಡು ಸೇರಿದಂತೆ ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕನಕಾಪುರ, ಹೆಚ್.ಡಿ. ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ನರಸೀಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪ್ರಾಧಿಕಾರದ ವತಿಯಿಂದ ಕುಡಿವ ನೀರಿನ ವ್ಯವಸ್ಥೆ, ವಿಶೇಷ ದಾಸೋಹ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಗೃಹದ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಲ್ಲದೇ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…