ಜಿಲ್ಲೆಗಳು

ಚಾ.ನಗರ : ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಬಳಿ ಹರಿದು ಬಂತು ಜನಸಾಗರ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಹಾಲಯ ಅಮಾವಾಸ್ಯೆಯ ಅಂಗವಾಗಿ ಮಾದಪ್ಪನ ಸನ್ನಿಧಿಯನ್ನು ವಿವಿಧ ಪುಷ್ಪಗಳಿಂದ ಸಿಂಗಾರಗೊಳಿಸಲಾಗಿತ್ತಲ್ಲದೇ ದೇಗುಲ ಹಾಗೂ ಗೋಪುರವನ್ನು ವಿವಿಧ ವಿದ್ಯುತ್ ದೀಪದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು ಶನಿವಾರ ಸಂಜೆ 6.30ರಿಂದ ರಾತ್ರಿ 8.30ರವರೆಗೆ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆಮಜ್ಜನೆ ಸೇವೆ ಧಾರ್ಮಿಕ ವಿಧಿವಿಧಾನದಿಂದ ನಡೆಯಿತು. ಈ ವೇಳೆ ದೇಗುಲದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಭಾನುವಾರ ಮಹಾಲಯ ಅಮಾವಾಸೆಯ ಹಿನ್ನಲೆ ಬೆಳಗಿನ ಜಾವ ಸ್ವಾಮಿಗೆ ಬಿಲ್ವಾರ್ಚನೆ, ವಿವಿಧ ಅಭಿಷೇಕ ಹಾಗೂ ಮಹಾಮಂಗಳಾರತಿಯೊಂದಿಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಮಾವಾಸೆ ವಿಶೇಷ ಪೂಜೆಗಳು ಜರುಗಿದವು.

ಆಗಮಿಸಿದ ಭಕ್ತರು ಸಂಪ್ರದಾಯದಂತೆ ದೇಗುಲದ ಮುಂಭಾಗ ಧೂಪ ಹಾಕಿ ಅಂತರಗಂಗೆಯ ಬಳಿ ಪುಣ್ಯಸ್ನಾನ ಮಾಡಿದರು. ಬಳಿಕ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರಲ್ಲದೇ ಆಲಂಬಾಡಿ ಬಸವಮೂರ್ತಿಗೂ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನಗಳ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವವು ದೇಗುಲದ ಸುತ್ತಲೂ ಜರುಗಿತು. ಈ ವೇಳೆ ಭಕ್ತರು ‘ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.

ಮಹಾಲಯ ಅಮವಾಸೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದ ರಾಜಗೋಪುರ, ಗರ್ಭಗುಡಿ ಗೋಪುರ,ಅಂತರಗಂಗೆ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ತಮಿಳುನಾಡು ಸೇರಿದಂತೆ ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕನಕಾಪುರ, ಹೆಚ್.ಡಿ. ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ನರಸೀಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪ್ರಾಧಿಕಾರದ ವತಿಯಿಂದ ಕುಡಿವ ನೀರಿನ ವ್ಯವಸ್ಥೆ, ವಿಶೇಷ ದಾಸೋಹ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಗೃಹದ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಲ್ಲದೇ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

andolanait

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

5 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago