ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಆಗಮಿಸಿದ ಭಕ್ತರು ಸಂಪ್ರದಾಯದಂತೆ ದೇಗುಲದ ಮುಂಭಾಗ ಧೂಪ ಹಾಕಿ ಅಂತರಗಂಗೆಯ ಬಳಿ ಪುಣ್ಯಸ್ನಾನ ಮಾಡಿದರು. ಬಳಿಕ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರಲ್ಲದೇ ಆಲಂಬಾಡಿ ಬಸವಮೂರ್ತಿಗೂ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನಗಳ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವವು ದೇಗುಲದ ಸುತ್ತಲೂ ಜರುಗಿತು. ಈ ವೇಳೆ ಭಕ್ತರು ‘ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಹಾಲಯ ಅಮವಾಸೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದ ರಾಜಗೋಪುರ, ಗರ್ಭಗುಡಿ ಗೋಪುರ,ಅಂತರಗಂಗೆ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ತಮಿಳುನಾಡು ಸೇರಿದಂತೆ ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕನಕಾಪುರ, ಹೆಚ್.ಡಿ. ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ನರಸೀಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪ್ರಾಧಿಕಾರದ ವತಿಯಿಂದ ಕುಡಿವ ನೀರಿನ ವ್ಯವಸ್ಥೆ, ವಿಶೇಷ ದಾಸೋಹ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಗೃಹದ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಲ್ಲದೇ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…