ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಆಗಮಿಸಿದ ಭಕ್ತರು ಸಂಪ್ರದಾಯದಂತೆ ದೇಗುಲದ ಮುಂಭಾಗ ಧೂಪ ಹಾಕಿ ಅಂತರಗಂಗೆಯ ಬಳಿ ಪುಣ್ಯಸ್ನಾನ ಮಾಡಿದರು. ಬಳಿಕ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರಲ್ಲದೇ ಆಲಂಬಾಡಿ ಬಸವಮೂರ್ತಿಗೂ ಪೂಜೆ ಸಲ್ಲಿಸಿದರು. ಪ್ರಾಧಿಕಾರದ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನಗಳ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಉತ್ಸವವು ದೇಗುಲದ ಸುತ್ತಲೂ ಜರುಗಿತು. ಈ ವೇಳೆ ಭಕ್ತರು ‘ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಜಯಘೋಷಗಳನ್ನು ಮೊಳಗಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಹಾಲಯ ಅಮವಾಸೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟದ ರಾಜಗೋಪುರ, ಗರ್ಭಗುಡಿ ಗೋಪುರ,ಅಂತರಗಂಗೆ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ತಮಿಳುನಾಡು ಸೇರಿದಂತೆ ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕನಕಾಪುರ, ಹೆಚ್.ಡಿ. ಕೋಟೆ, ಪಿರಿಯಾಪಟ್ಟಣ, ನಂಜನಗೂಡು, ನರಸೀಪುರ ಹಾಗೂ ಇನ್ನಿತರ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪ್ರಾಧಿಕಾರದ ವತಿಯಿಂದ ಕುಡಿವ ನೀರಿನ ವ್ಯವಸ್ಥೆ, ವಿಶೇಷ ದಾಸೋಹ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಗೃಹದ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿತ್ತಲ್ಲದೇ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…